ಮತ್ತೆ ಸಂಕಷ್ಟದಲ್ಲಿ ಬಿ.ಎಸ್. ವೈ.

Webdunia
ಬುಧವಾರ, 14 ಸೆಪ್ಟಂಬರ್ 2022 (15:26 IST)
.ಎಸ್.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನೀಡಿರುವ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಬಿ.ಜಯಂತ್‌ಕುಮಾರ್‌ಆದೇಶ ಹೊರಡಿಸಿದ್ದಾರೆ. ನವೆಂಬರ್ 2 ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್‌ಸ್ಪೆಕ್ಟರ್ ಅವರಿಗೆ ನ್ಯಾಯಾಲಯ ಸೂಚಿಸಿದೆ.
ದೂರಿನಲ್ಲಿ ಬಿ.ಎಸ್.ಯಡಿಯೂರಪ್ಪ , ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಬಿಎಸ್‌ವೈ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್‌ಶ್ರೀ, ಅಂದಿನ ಬಿಡಿಎ ಅಧ್ಯಕ್ಷ, ಹಾಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ.ಪ್ರಕಾಶ್, ಕೆ.ರವಿ, ಬಿಎಸ್‌ವೈ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಹಾಗೂ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ. ಹೀಗಾಗಿ, ಅವರ ವಿರುದ್ಧ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕುದಿಯುವ ಜ್ವರದಲ್ಲೂ ಟೀಕಾಕಾರರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments