ಎಕ್ಸಿಟ್ ಪೋಲ್ ಸಮೀಕ್ಷೆಯಿಂದ ಕೈ ಪಡೆಗೆ ಹತಾಶೆ ಎಂದ BSY

Webdunia
ಸೋಮವಾರ, 20 ಮೇ 2019 (13:40 IST)
ರಾಷ್ಟ್ರದ ಬಹುತೇಕ ಎಲ್ಲ ಸಮೀಕ್ಷಗಳಲ್ಲೂ ಬಿಜೆಪಿ - ಎನ್ ಡಿ ಎಗೆ ಬಹುಮತ ಬರುತ್ತದೆ ಎಂದೇ ಬಂದಿದೆ. ರಾಜ್ಯದಲ್ಲೂ ನಾವು 22-23 ಸ್ಥಾನಗಳನ್ನು ನಿರೀಕ್ಷಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಮೇ 23 ರ ನಂತರ ರಾಜ್ಯ ಮತ್ತು ರಾಷ್ಟ್ರದಲ್ಲಿ ರಾಜಕೀಯ ಚಿತ್ರಣ ಬದಲಾಗುತ್ತದೆ. ಈ ಸಮೀಕ್ಷೆಗಳನ್ನು ನೋಡಿ ಕಾಂಗ್ರೆಸ್ ಪ್ರಮುಖರು ಹತಾಶರಾಗಿ ಮನಬಂದಂತೆ ಹೇಳುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಟೀಕೆ ಮಾಡಿದ್ದಾರೆ.

ರಾಜ್ಯದಲ್ಲಿ ತೀವ್ರ ಬರ ಇದೆ. ಧರ್ಮಸ್ಥಳದಲ್ಲೂ ಇದೇ ಮೊದಲ ಬಾರಿ ಜಲಕ್ಷಾಮ ಕಾಣಿಸಿಕೊಂಡಿದೆ. ಭಕ್ತಾದಿಗಳು ಪ್ರವಾಸ ಮುಂದೂಡಿ ಎಂದು ಧರ್ಮಾಧಿಕಾರಿಗಳೇ ಮನವಿ ಮಾಡಿಕೊಂಡಿದ್ದಾರೆ. ಇನ್ನು ಎರಡು ಮೂರು ವಾರದಲ್ಲಿ ಮಳೆಯಾಗದೇ ಇದ್ದರೆ ಪರಿಸ್ಥಿತಿ ತೀವ್ರವಾಗುತ್ತದೆ. ಈ ಹಂತದಲ್ಲಿ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಕಚೇರಿಯಲ್ಲಿ ಪೂಜೆ ಹೋಮ ಏರ್ಪಡಿಸಿದ್ದಾರೆ ಎಂದರು.

ಎಕ್ಸಿಟ್ ಪೋಲ್ ಸಮೀಕ್ಷೆ ಬಿಜೆಪಿ ಅಧ್ಯಕ್ಷರ ಸಮೀಕ್ಷೆ ಎಂಬ ಪರಮೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ, ಎಕ್ಸಿಟ್ ಪೋಲ್ ಸಮೀಕ್ಷೆ ಏನಾದ್ರು ರಾಜಕೀಯ ನಾಯಕರು ನಡೆಸೋಕೆ ಬರುತ್ತಾ? ಪರಮೇಶ್ವರ ಹೇಳಿಕೆಯಲ್ಲಿ ಹತಾಶೆ ಭಾವನೆ ಇದೆ. ಕಾಂಗ್ರೆಸ್ ನಾಯಕರು ಹತಾಶರಾಗಿ ಈ ರೀತಿಯ ಹೇಳಿಕೆ ಕೊಡ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments