Webdunia - Bharat's app for daily news and videos

Install App

ಬಜೆಟ್: ಬಿಜೆಪಿಯವರು ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ ಸಿಎಂ

Webdunia
ಸೋಮವಾರ, 23 ಜುಲೈ 2018 (16:04 IST)
ಬಜೆಟ್ ನಲ್ಲಿ ಎಲ್ಲ ಜಿಲ್ಲೆಗಳಿಗೆ ಸಮಪಾಲು ಕೊಟ್ಟಿದ್ದೇನೆ. ಉತ್ತರ ಕರ್ನಾಟಕದ ಜನರಿಗೆ ನಾನು ಯಾವುದೇ ಅನ್ಯಾಯ ಮಾಡಿಲ್ಲಾ. ಬಿಜೆಪಿ ನಾಯಕರು ಇರುವ ಜಾಗಕ್ಕೆ ನಾನೇ ಹೋಗುತ್ತೇನೆ. ಈ ಬಗ್ಗೆ ಬಿಜೆಪಿಯವರು ಚರ್ಚೆಗೆ ಬರಲಿ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಎಬಿವಿಪಿ ಮೂಲಕ ಬಿಜೆಪಿ ಯವರು ಬಸ್ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ನನ್ನ ಬಳಿ ಅಷ್ಟು ಸುಲಭವಾಗಿ ರಾಜಕೀಯ ನಡೆಯಲ್ಲ. ಈ ಸರಕಾರ ಆರು ವರೆ ಕೋಟಿ ಜನರ ಸರಕಾರ. ಆದ್ರೆ ಮಾದ್ಯಮಗಳು ಇದನ್ನೆ ದೊಡ್ಡ ವಿಷಯ ಮಾಡಿಕೊಂಡು ಚರ್ಚೆ ನಡೆಸುತ್ತಿವೆ. ಬಿಜೆಪಿ ನಾಯಕರು ಉತ್ತರ ಕರ್ನಾಟಕದ ಭಾಗಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಬೇಕಾದ್ರೆ ಬಿಜೆಪಿ ನಾಯಕರು ಚರ್ಚೆಗೆ ಬರಲಿ ನಾನು ಸಿದ್ಧ ಎಂದರು.

ಹೆಚ್.ಡಿ.ದೇವೇಗೌಡ ಹಾಗೂ ಹೆಚ್‌.ಡಿ.ಕುಮಾರಸ್ವಾಮಿ ಕಾಲದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಎಷ್ಟು ಅನುದಾನ ಕೊಟ್ಟಿದ್ದೇವೆ ಅಂತಾ ಚರ್ಚೆಗೆ ಬರಲಿ. ಉತ್ತರ ಕರ್ನಾಟಕದ ಜನರಿಗೆ ನಾನು 20 ತಿಂಗಳು ಸಿಎಂ ಆಗಿದ್ದ ವೇಳೆ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಆದ್ರೆ ಚುನಾವಣೆಯಲ್ಲಿ ಅಲ್ಲಿನ ಜನ್ರು ನನ್ನ ಕೈ ಹಿಡಿಯಲಿಲ್ಲ. ಇವತ್ತು ಅಲ್ಲಿನ ಜನ್ರು ನಮಗೆ ಸಮಸ್ಯೆ ಇದೆ ಸಮಸ್ಯೆ ಇದೆ ಎಂದು ಪ್ರತಿಭಟನೆ ಮಾಡುತ್ತಾರೆ. ಈ  ಬಾರಿ ಚುನಾವಣೆಯಲ್ಲಿ ನನಗೆ ಮತ ಮಾತ್ರ ಹಾಕಿಲ್ಲ. ಬಿಜೆಪಿಯವರು ಸಣ್ಣ ತನದ ಕೀಳುಮಟ್ಟದ ಜಾತಿ ರಾಜಕೀಯ ಮಾಡುತ್ತಿದ್ದಾರೆ. ಕೆಲವರಿಗೆ ಬೇರೆ ರಾಜ್ಯದ ಅವಶ್ಯಕತೆ ಇದೆ, ಬೇಕಾದ್ರೆ ಬೇರೆ ರಾಜ್ಯ ತೆಗೆದುಕೊಳ್ಳಲಿ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments