Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಇಲಾಖೆ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿರುವ ಘಟನೆ ತಾಲೂಕಿನ ಬಡೇಕೊಳ್ಳಿಮಠ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಭಾರಿ ಮಳೆಯಿಂದಾಗಿ ರಾಷ್ಟ್ರೀಯ 4ರಲ್ಲಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ ಆಗಿದೆ.
ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಸ್ ಬೆಳಗಾವಿಯಿಂದ ಹಾವೇರಿ ಜಿಲ್ಲೆಯ ಹಿರೇಕೆರೂರಗೆ ಹೋಗುತ್ತಿತ್ತು.
ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ 35 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.