Webdunia - Bharat's app for daily news and videos

Install App

ಉಪಚುನಾವಣೆಯ ರಿಸಲ್ಟ್‌ ಸಂಘಟನೆಯ ಮೇಲೆ ಪ್ರಭಾವ ಬೀರುವುದಿಲ್ಲ: ಬಿ.ವೈ ವಿಜಯೇಂದ್ರ

Sampriya
ಮಂಗಳವಾರ, 26 ನವೆಂಬರ್ 2024 (17:09 IST)
ಬೆಂಗಳೂರು:  ಕರ್ನಾಟಕದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವು ಪಕ್ಷದ ಸಂಘಟನೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಇದನ್ನು ಸಂಪೂರ್ಣವಾಗಿ ಉಪೇಕ್ಷಿಸೋಣ ಎಂದು ಬಿಜೆಪಿ ರಾಜ್ಯ ಘಟಕದ ಆಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಪತ್ರ ಬರೆದಿರುವ ಅವರು, ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ. ಈ ಫಲಿತಾಂಶ ಭವಿಷ್ಯದಲ್ಲಿ ಎದುರಾಗಲಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತವೂ ಆಗಿದೆ ಎಂದು ಭಾವಿಸೋಣ ಎಂದಿದ್ದಾರೆ.

ಪಕ್ಷದಲ್ಲಿ ಹಿರಿಯರ ಆಶೀರ್ವಾದ ಮತ್ತು ಪ್ರಮುಖರ ಮಾರ್ಗದರ್ಶನ ಪಡೆದು ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಿಯಾಶೀಲರಾಗಿ ಸಂಘಟನೆ ಬಲಗೊಳಿಸಬೇಕಾಗಿದೆ.  ಒಂದು ದಿನವೂ ವ್ಯರ್ಥ ಮಾಡದೇ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರ ತರುವ ನಿಟ್ಟಿನಲ್ಲಿ ಸಂಕಲ್ಪ ಮಾಡಬೇಕಾಗಿದೆ. ಉಪಚುನಾವಣೆ ಫಲಿತಾಂಶಗಳು ಪಕ್ಷದ ಸಂಘಟನೆಯ ಸಾಮರ್ಥ್ಯ ಮತ್ತು ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನುಆಧರಿಸಿ ಚುನಾವಣೆ ಫಲಿತಾಂಶಗಳು ಹೊರಹೊಮ್ಮುತ್ತವೆ ಎಂದು ವಿವರಿಸಿದ್ದಾರೆ.

ಬಿಜೆಪಿ ಸುಭದ್ರ ಕೋಟೆಯ ನಡುವೆ ಬಿರುಕು ಮೂಡಿಸಲು ಯತ್ನಿಸುವ ಶಕ್ತಿಗಳನ್ನು ಮೆಟ್ಟಿ ನಿಂತು ನಮ್ಮೆಲ್ಲರ ಒಗ್ಗಟ್ಟಿನ ಮುಷ್ಠಿ ದೇಶ ಕಟ್ಟುವ ಶಕ್ತಿಯಾಗಬೇಕಿದೆ. ಮುಂದೆಯೂ ಮಿತ್ರಪಕ್ಷ ಜೆಡಿಎಸ್‌ ಜತೆ ಸಹಕಾರದ ಹೆಜ್ಜೆಗಳನ್ನು ಇಡೋಣ. ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ಧೋರಣೆ ಮತ್ತು ಭ್ರಷ್ಟ ಆಡಳಿತವನ್ನು ಕೊನೆಗಾಣಿಸುವುದಕ್ಕಾಗಿ ಎಂಬ ಶಪಥ ಮಾಡೋಣ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments