Webdunia - Bharat's app for daily news and videos

Install App

ಸಂಘಟನೆಗಳ ಬೇಡಿಕೆ ಕುರಿತು ಸದನದಲ್ಲಿ ಪ್ರಸ್ತಾಪ: ವಿಜಯೇಂದ್ರ

Krishnaveni K
ಮಂಗಳವಾರ, 17 ಡಿಸೆಂಬರ್ 2024 (15:59 IST)
ಬೆಳಗಾವಿ: ಇಲ್ಲಿ ವಿವಿಧ ಬೇಡಿಕೆ ಮುಂದಿಟ್ಟು ಹೋರಾಟ ಮಾಡುತ್ತಿರುವ ಸಂಘಟನೆಗಳ ಅಹವಾಲು, ಬೇಡಿಕೆ ಕುರಿತ ಮನವಿಪತ್ರಗಳನ್ನು ಸ್ವೀಕರಿಸಿದ್ದು, ಇವುಗಳ ಕುರಿತು ಸದನದಲ್ಲಿ ಪ್ರಸ್ತಾಪ ಮಾಡಲು ಪ್ರಯತ್ನಿಸುವುದಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
 
ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಡಪದ ಅಪ್ಪಣ್ಣ ಸಮಾಜದ ಸ್ವಾಮೀಜಿಗಳು, ಮುಖಂಡರು ಬಂದಿದ್ದಾರೆ. ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿರುವ ವಿಕಲಚೇತನರು, ಕಿವುಡರೂ ಬಂದಿದ್ದರು. ಅವರ ಮನವಿಯನ್ನೂ ಸ್ವೀಕರಿಸಿದ್ದೇನೆ ಎಂದು ತಿಳಿಸಿದರು.
ಪಿಯುಸಿ ಅತಿಥಿ ಉಪನ್ಯಾಸಕರಲ್ಲಿ ನೋವಿದೆ. 20-30 ವರ್ಷಗಳಿಂದ ಸೇವೆ ಮಾಡುತ್ತಿದ್ದರೂ ಅತಿಥಿ ಉಪನ್ಯಾಸಕರಿಗೆ ಭದ್ರತೆ ಇಲ್ಲ; ಕನಿಷ್ಠ 25 ಸಾವಿರದಿಂದ 30 ಸಾವಿರ ಗೌರವಧನ ಸಿಗಬೇಕೆಂಬ ಬೇಡಿಕೆ ಅವರದೂ ಇದೆ ಎಂದು ವಿವರಿಸಿದರು.
 
ಕೂಡು ಒಕ್ಕಲಿಗರ ಸಮುದಾಯದ ಬೇಡಿಕೆಗಳನ್ನು ಕುರಿತ ಮನವಿಯನ್ನೂ ಸ್ವೀಕರಿಸಿದ್ದೇನೆ. ಚರ್ಮಗಾರ ಸಮಾಜದ ಮನವಿಯನ್ನೂ ಸ್ವೀಕರಿಸಿದ್ದೇನೆ. ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಶಾಸಕರಾದ ಹರೀಶ್ ಪೂಂಜ, ಶೈಲೇಂದ್ರ ಬೆಲ್ದಾಳೆ ಅವರು ಸೇರಿ ಬಂದಿದ್ದೇವೆ. ಇವರೆಲ್ಲರ ಧ್ವನಿಯಾಗಿ ಸದನದಲ್ಲಿ ಮಾತನಾಡಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.
 
ಅನ್ವರ್ ಮಾಣಿಪ್ಪಾಡಿ ಅವರು ನನ್ನ ಬಗ್ಗೆ ಹೇಳಿದ್ದನ್ನು ಒಪ್ಪಿ, ಆದರೆ, ಅವರ ವರದಿ ಒಪ್ಪುವುದಿಲ್ಲ ಎಂದರೆ ಅದು ದ್ವಿಮುಖ ನೀತಿಯಲ್ಲವೇ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ್ದೇನೆ ಎಂದು ನುಡಿದರು.
ನನ್ನ ಮೇಲಿನ ಆರೋಪ, ಅನ್ವರ್ ಮಾಣಿಪ್ಪಾಡಿ ವರದಿ, ಯಾರ್ಯಾರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೋ, ಅದೆಲ್ಲದರ ಸಮಗ್ರ ತನಿಖೆ ಆಗಬೇಕು. ವಕ್ಫ್‍ನಲ್ಲಿ ಲೂಟಿ ಹೊಡೆದವರು ಕಾಂಗ್ರೆಸ್ ಮುಖಂಡರು. ಸಿಬಿಐನಿಂದ ಇದೆಲ್ಲದರ ಸಮಗ್ರ ತನಿಖೆ ಆಗಬೇಕೆಂದು ನಾವು ಕೂಡ ಒತ್ತಾಯ ಮಾಡಿದ್ದೇವೆ ಎಂದು ಹೇಳಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments