Webdunia - Bharat's app for daily news and videos

Install App

ಬಿಜೆಪಿಗೆ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಶಕ್ತಿ: ವಿಜಯೇಂದ್ರ

Krishnaveni K
ಬುಧವಾರ, 9 ಏಪ್ರಿಲ್ 2025 (20:28 IST)
ಮಂಗಳೂರು: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಶಕ್ತಿ ಬಿಜೆಪಿಗೆ ಇದೆ ಎಂಬ ಸಂದೇಶವನ್ನು 83 ವರ್ಷದ ಮಹಿಳೆ ವತ್ಸಲಾ ಕಾಮತ್ ಅವರು ಸಾಂಕೇತಿಕವಾಗಿ ತೋರಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ವಿಶ್ವಾಸದಿಂದ ನುಡಿದರು.
 
ಬಿಜೆಪಿ ಜನಾಕ್ರೋಶ ಯಾತ್ರೆಯ ಮೂರನೇ ದಿನವಾದ ಇಂದು ಇಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬೂತ್ ಅಧ್ಯಕ್ಷರಾದ ವತ್ಸಲಾ ಕಾಮತ್ ಅವರು ನನಗೆ ಬಿಜೆಪಿಯ ಧ್ವಜವನ್ನು ಕೊಟ್ಟು ನಮ್ಮ ಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ, ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ರಾಜ್ಯದ ಮುಖ್ಯಮಂತ್ರಿಗಳಾಗಿ ನೀವು ಮಾಡುತ್ತಿದ್ದೀರಿ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂಬ ಸಂದೇಶ ಇದಾಗಿದೆ ಎಂದು ಎಚ್ಚರಿಸಿದರು.
 
ಲಜ್ಜೆಗೆಟ್ಟ ಕಾಂಗ್ರೆಸ್ ಪಕ್ಷವು ಇವತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ನಾನು ಪತ್ರಿಕೆಯಲ್ಲಿ ನೋಡಿದ್ದೇನೆ. ಪ್ರವೀಣ್ ನೆಟ್ಟಾರ್ ಅವರನ್ನು ಕೊಲೆ ಮಾಡಿದ ದೇಶದ್ರೋಹಿಯನ್ನು ನಿನ್ನೆ ಕೋರ್ಟಿಗೆ ಕರೆದುಕೊಂಡು ಬರಲಾಗುತ್ತಿತ್ತು. ಒಬ್ಬ ದೇಶದ್ರೋಹಿ ಬಂದು ಇನ್ನೊಬ್ಬ ದೇಶದ್ರೋಹಿಗೆ ಮುತ್ತಿಕ್ಕಿದ್ದಾನೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಿದ್ದರೆ, ಯಡಿಯೂರಪ್ಪ ಅವರಂಥವರು ಮುಖ್ಯಮಂತ್ರಿಯಾಗಿದ್ದರೆ ಆ ದೇಶದ್ರೋಹಿಯ ಮೇಲೆ ಅಲ್ಲೇ ಗುಂಡು ಹಾರಿಸುವ ಕೆಲಸವನ್ನು ಬಿಜೆಪಿ ಸರಕಾರ ಮಾಡುತ್ತಿತ್ತು ಎಂದರು.
 
ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತ ಅಲ್ಲಿನ ಆಸ್ಪತ್ರೆ ವ್ಯವಸ್ಥೆ, ಶೌಚಾಲಯ ಸರಿ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದರೆ, ಅವರ ವಿರುದ್ಧ ಕೇಸ್ ಹಾಕಿ ಪೊಲೀಸರ ಮೂಲಕ ದಬ್ಬಾಳಿಕೆ ಮಾಡುವ ಕೆಲಸ ಮಾಡಿದ್ದಾರೆ. ಅವರಿಗೆ ಕೋರ್ಟಿನಲ್ಲಿ ತಡೆಯಾಜ್ಞೆ, ಜಾಮೀನು ಸಿಕ್ಕಿದರೂ ಸಹ ಇವತ್ತು ಆತ್ಮಹತ್ಯೆ ಮಾಡಿಕೊಳ್ಳುವಂಥ ಪುಂಡತನವನ್ನು ಕಾಂಗ್ರೆಸ್ ಸರಕಾರ ತೋರಿಸಿದೆ ಎಂದು ಟೀಕಿಸಿದರು.
 
ಇಂಥ ಹಿಂದೂ ವಿರೋಧಿ ಸರಕಾರಕ್ಕೆ ನಾವು ತಕ್ಕ ಉತ್ತರ ನೀಡಬೇಕಿದೆ ಎಂದು ಮನವಿ ಮಾಡಿದರು. ರಾಜ್ಯ ಸರಕಾರ ಮತ್ತು ಸಿದ್ದರಾಮಯ್ಯನವರು ಸರಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ 4ರಷ್ಟು ಮೀಸಲಾತಿ ನೀಡಿದ್ದಾರೆ ಎಂದರಲ್ಲದೆ, ಯಾಕೆ ಹಿಂದೂಗಳು ಬದುಕಿಲ್ಲವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು.
 
ಮುಸಲ್ಮಾನ ಹೆಣ್ಮಕ್ಕಳಿಗೆ ಆತ್ಮರಕ್ಷಣೆಗಾಗಿ ನೂರಾರು ಕೋಟಿ ಕೊಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ನಾಚಿಕೆ ಆಗಬೇಕು ಎಂದು ಟೀಕಿಸಿದರು. ಹಿಂದೂ ಹುಡುಗಿಯರು ಇವತ್ತು ಲವ್ ಜಿಹಾದ್‍ಗೆ ಬಲಿ ಆಗುತ್ತಿದ್ದಾರೆ. ಅವರ ಆತ್ಮರಕ್ಷಣೆ ತರಬೇತಿಗಾಗಿ ಹಣ ಕೊಡುವ ಬದಲು ಮುಸಲ್ಮಾನರಿಗೆ ಕೊಡುತ್ತಾರಂತೆ ಎಂದು ಆಕ್ಷೇಪಿಸಿದರು. 
 
ಮುಸಲ್ಮಾನ ಯುವಜನರು ಹೊರದೇಶಕ್ಕೆ ಉನ್ನತ ಶಿಕ್ಷಣಕ್ಕೆ ಹೋಗುವುದಾದರೆ 20 ಲಕ್ಷ ಕೊಡುತ್ತಿದ್ದು, ಅದನ್ನು 30 ಲಕ್ಷಕ್ಕೆ ಏರಿಸುವುದಾಗಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇಂಥ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂದು ಪುನರುಚ್ಚರಿಸಿದರು.
 
ಈ ಪುಣ್ಯಾತ್ಮ ರಾಜ್ಯದ ಮುಖ್ಯಮಂತ್ರಿಯಾದ ಮೇಲೆ 50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಆಗಿದೆ. ಪೌಷ್ಟಿಕ ಆಹಾರ ಹಾಲಿಗೆ ಇದುವರೆಗೆ 9 ರೂ. ಹೆಚ್ಚಿಸಿದ್ದಾರೆ. ಪೆಟ್ರೋಲ್, ಡೀಸೆಲ್ ದರವನ್ನು ಸಿದ್ದರಾಮಯ್ಯನವರ ಸರಕಾರ ಏಳೂವರೆ ರೂ. ಹೆಚ್ಚಿಸಿದೆ ಎಂದು ಆಕ್ಷೇಪಿಸಿದರು.
 
ಈ ಜನವಿರೋಧಿ ಸರಕಾgದ ಸಚಿವರು ಮಾತೆತ್ತಿದರೆ ಕೇಂದ್ರವನ್ನು ದೂರುತ್ತಾರೆ. ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲ ವರು ಮೊನ್ನೆ ಬಜೆಟ್ ಮಂಡಿಸುವಾಗ ನಮ್ಮ ಪ್ರಧಾನಮಂತ್ರಿ ಮೋದಿಜೀ ಅವರನ್ನು ಶ್ಲಾಘಿಸಿದ್ದಾರೆ. ಜಮ್ಮು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ನೆರವಾದ ಮೋದಿಜೀ ಅವರನ್ನು ಅಭಿನಂದಿಸಿದ್ದಾರೆ ಎಂದು ಸಿದ್ದರಾಮಯ್ಯನವರ ಗಮನ ಸೆಳೆದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments