Webdunia - Bharat's app for daily news and videos

Install App

ದೇಶದ್ರೋಹಿಗಳ ವಿರುದ್ಧ ಕೇಸ್ ಹಾಕಿದ್ರೆ ಹಿಂಪಡೆಯುತ್ತಾರೆ, ಸ್ವಾಮೀಜಿ ವಿರುದ್ಧ ಯಾಕೆ ಕೇಸ್

Krishnaveni K
ಸೋಮವಾರ, 2 ಡಿಸೆಂಬರ್ 2024 (15:56 IST)
ಬೆಂಗಳೂರು: ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಇದರ ನಡುವೆ ರಾಜ್ಯ ಸರಕಾರವು ಸ್ವಾಮೀಜಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ ಎಂದು ಆಕ್ಷೇಪಿಸಿದರು.

ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು. ಆದರೂ ಕೂಡ, ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು. ರಾಜ್ಯ ಸರಕಾರವು ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ; ಮಠಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ. ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ ಎಂದು ಟೀಕಿಸಿದರು. ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ ಎಂದು ವಿವರಿಸಿದರು.

ಯತ್ನಾಳ್ ವಿಚಾರ, ನಕಲಿ ನೋಟಿಸ್ ಎಂಬ ಹೇಳಿಕೆ ಕುರಿತು ಪದೇಪದೇ ಮಾತನಾಡುವುದಿಲ್ಲ. ನೋಟಿಸ್ ಅಸಲಿಯೇ ನಕಲಿಯೇ ಎಂಬುದು ಬರುವ ದಿನಗಳಲ್ಲಿ ಗೊತ್ತಾಗಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
 
ಬೇರೆ ಬೇರೆ ಕಾನೂನು ಇದೆಯೇ?- ಡಾ.ಸಿ.ಎನ್.ಅಶ್ವತ್ಥನಾರಾಯಣ್
ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥÀನಾರಾಯಣ್ ಅವರು ಮಾತನಾಡಿ, ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ. ದೇಶವಿರೋಧಿ, ಗಲಭೆ ಎಬ್ಬಿಸುವ ಹಾಗೂ ಸೌಹಾರ್ದತೆ ಹಾಳು ಮಾಡುವ ರೀತಿಯಲ್ಲಿ ಹೇಳಿಕೆ ಕೊಟ್ಟ ಇತರರ ಬಗ್ಗೆ ಸರಕಾರ ಯಾಕೆ ಕೇಸು ಹಾಕಿಲ್ಲ? ಅವರ ಮೇಲೂ ಪ್ರಕರಣ ದಾಖಲಿಸಬೇಕಿತ್ತಲ್ಲವೇ? ಕಾನೂನು ಬೇರೆ ಬೇರೆ ಇದೆಯೇ ಎಂದು ಪ್ರಶ್ನಿಸಿದರು.
 
ಸ್ವಾಮೀಜಿಯವರಿಗೆ 80 ವರ್ಷವಾಗಿದ್ದು, ಅನಾರೋಗ್ಯದಿಂದಿದ್ದಾರೆ. ಬಹಳ ನೊಂದಿದ್ದಾರೆ. ದೇಶದ್ರೋಹಿಗಳಿಗೂ ಇದು ಅನ್ವಯ ಮಾಡಬೇಕಿತ್ತು ಎಂದು ತಿಳಿಸಿದರು. ಎಲ್ಲರೂ ಒಗ್ಗೂಡಿ ಕೆಲಸ ಮಾಡಿ ಎಂದು ಸ್ವಾಮೀಜಿ ತಿಳಿಸಿದ್ದಾಗಿ ಹೇಳಿದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments