Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದ ಪಿತಾಮಹರು: ಬಿವೈ ವಿಜಯೇಂದ್ರ

Krishnaveni K
ಮಂಗಳವಾರ, 28 ಮೇ 2024 (14:53 IST)
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
 
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಮಾನ್ಯ ಮುಖ್ಯಮಂತ್ರಿಗಳು, ಯಾರೇ ಒಬ್ಬ ಸಚಿವರು ಒಂದೇ ಒಂದು ಗುದ್ದಲಿಪೂಜೆ ಮಾಡಿಲ್ಲ; ಒಂದೇ ಒಂದು ಶಂಕುಸ್ಥಾಪನೆ ಆಗಿಲ್ಲ. ಹೊಸ ಯೋಜನೆಗಳನ್ನು ಘೋಷಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯವು ಭೀಕರ ಬರಗಾಲದಿಂದ ತತ್ತರಿಸಿದೆ. ಕೇಂದ್ರ ಸರಕಾರದಿಂದ ಅನುದಾನ ಬಂದರೂ ತಾಂತ್ರಿಕ ಕಾರಣಗಳನ್ನು ಒಡ್ಡಿ ರೈತರಿಗೆ ಇನ್ನೂ ಸರಿಯಾದ ರೀತಿಯಲ್ಲಿ ಪರಿಹಾರ ಮೊತ್ತವನ್ನು ನೀಡಿಲ್ಲ. ಬೆಳೆ ವಿಮೆಯನ್ನೂ ಕೊಟ್ಟಿಲ್ಲ. ಇದು ರೈತರಲ್ಲಿ ಸಾಕಷ್ಟು ಆತಂಕ ಉಂಟುಮಾಡಿದೆ ಎಂದು ವಿವರಿಸಿದರು.
ಈ ರಾಜ್ಯ ಸರಕಾರಕ್ಕೆ ರೈತಪರ ಕಾಳಜಿ ಇಲ್ಲದೇ ಇರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ಕುಸಿತದ ಕುರಿತು ಇಡೀ ದೇಶದಲ್ಲಿ ಚರ್ಚೆ ಆಗಿದೆ. ಎಲ್ಲಿ ನೋಡಿದರೂ ಕೊಲೆಗಳು ನಡೆಯುತ್ತಿವೆ. ಚನ್ನಗಿರಿಯಲ್ಲಿ ಪೊಲೀಸರಿಗೇ ಪೊಲೀಸರು ರಕ್ಷಣೆ ಕೊಡಬೇಕಾದ ಸಂದರ್ಭ ಸೃಷ್ಟಿ ಆಗಿದೆ. ಮಟ್ಕಾ ದಂಧೆ ಯಥೇಚ್ಛವಾಗಿ ರಾಜ್ಯಾದ್ಯಂತ ನಡೆದಿದೆ. ಕಾನೂನುಬಾಹಿರ ದುಷ್ಕøತ್ಯಗಳು ಯಾರ ಭಯವೂ ಇಲ್ಲದೇ ನಡೆಯುತ್ತಿವೆ ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments