Webdunia - Bharat's app for daily news and videos

Install App

ಚನ್ನಪಟ್ಟಣ ಅಭ್ಯರ್ಥಿ ಕುರಿತು ಕುಮಾರಸ್ವಾಮಿ ಜೊತೆ ಚರ್ಚಿಸಲು ಸಮಯ ಸಿಕ್ಕಿಲ್ಲ ಎಂದ ವಿಜಯೇಂದ್ರ

Krishnaveni K
ಶನಿವಾರ, 19 ಅಕ್ಟೋಬರ್ 2024 (16:09 IST)
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಈ ಬಗ್ಗೆ ಇಂದು ಮಾಧ್ಯಮಗಳ ಮುಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಚನ್ನಪಟ್ಟಣ ಅಭ್ಯರ್ಥಿ ಕುರಿತು ಕುಮಾರಸ್ವಾಮಿಯವರ ಜೊತೆ ಚರ್ಚೆಗೆ ಸಮಯ, ಸ್ಥಳ ನಿಗದಿ ಆಗಿಲ್ಲ ಎಂದು ಪ್ರಶ್ನೆಗೆ ಉತ್ತರಿಸಿದ ಅವರು, ಇವತ್ತು ಅಥವಾ ನಾಳೆ ಕುಳಿತು ಚರ್ಚಿಸುತ್ತೇವೆ ಎಂದರು. ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಆ ಕ್ಷೇತ್ರಕ್ಕೆ ಅವರದೇ ಆದ ಕೊಡುಗೆ ನೀಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಬಳಿಕ ಆ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಈಗ ಸಂಸದ, ಕೇಂದ್ರದ ಸಚಿವರಾಗಿದ್ದಾರೆ. ಆ ಕ್ಷೇತ್ರದ ಕುರಿತು ಎಚ್‍ಡಿಕೆಯವರು ನಮ್ಮ ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿದ್ದಾರೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದರು.

ಯೋಗೇಶ್ವರ್‍ಗೆ ಅನ್ಯಾಯ ಆಗಬಾರದೆಂಬ ಆಸೆ ನನಗೂ ಇದೆ. ಇಲ್ಲಿಯೂ ಚರ್ಚೆ ಮಾಡುತ್ತೇವೆ. ಕೇಂದ್ರದ ವರಿಷ್ಠರು ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ಪ್ರಶ್ನೆಗೆ ಉತ್ತರಿಸಿದರು. ಒಂದೆಡೆ ಯೋಗೇಶ್ವರ್, ಇನ್ನೊಂದೆಡೆ ಕುಮಾರಸ್ವಾಮಿ ತಮ್ಮ ಪಕ್ಷದವರಿಗೆ ಟಿಕೆಟ್ ಕೊಡಿಸಲು ಪಟ್ಟು ಹಿಡಿದು ಕೂತಿದ್ದಾರೆ.

ಇನ್ನು, ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಬಗ್ಗೆ ಪ್ರತಿಕ್ರಿಯಿಸಿರುವ ಅವರು ‘ಇ.ಡಿ. ಅಖಾಡಕ್ಕೆ ಇಳಿದಿದೆ. ಮೈಸೂರು ಮುಡಾ ಮೇಲೆ ದಾಳಿಯನ್ನೂ ನಡೆಸಿದೆ. ಇವತ್ತು ಕೂಡ ದಾಳಿ ಮುಂದುವರೆದಿದೆ. ಆದರೆ, ಮುಖ್ಯಮಂತ್ರಿಗಳು ತಾನು ನಿರಪರಾಧಿ ಎಂಬಂತೆ ಬಿಂಬಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದಾರೆ. ಇ.ಡಿ. ಕೇಂದ್ರ ಸರಕಾರದ ಕೈಗೊಂಬೆ ಎನ್ನುವ ರೀತಿಯಲ್ಲಿ ಟೀಕಿಸುತ್ತಿದ್ದಾರೆ. ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿ ಮುಖ್ಯಮಂತ್ರಿಗಳು ಇದ್ದಂತಿದೆ’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments