Webdunia - Bharat's app for daily news and videos

Install App

ಸಿಟಿ ರವಿ ತಲೆಗೆ ಪೆಟ್ಟು ಬಿದ್ದರೂ ಮಾನವೀಯತೆ ತೋರಿಸಲಿಲ್ಲ: ಬಿವೈ ವಿಜಯೇಂದ್ರ ಆಕ್ರೋಶ

Krishnaveni K
ಶುಕ್ರವಾರ, 20 ಡಿಸೆಂಬರ್ 2024 (10:52 IST)
ಬೆಳಗಾವಿ: ಮಾಜಿ ಸಚಿವರೂ ಆದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಭಯೋತ್ಪಾದಕರಂತೆ ನಡೆಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
 
ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂಥ ಘಟನೆ ರಾಜ್ಯ ಮಾತ್ರವಲ್ಲ; ಇಡೀ ದೇಶದಲ್ಲಿ ಆಗಿರಲು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು. ನಾಲ್ಕೈದು ಪೊಲೀಸ್ ಠಾಣೆಗೆ ಕರೆದೊಯ್ದು ಅಲ್ಲಿ ಕೂರಿಸಿದ್ದಾರೆ. ವಿಪಕ್ಷ ನಾಯಕರು, ವಕೀಲರನ್ನೂ ಒಳಕ್ಕೆ ಬಿಟ್ಟಿಲ್ಲ ಎಂದು ಖಂಡಿಸಿದರು.
 
ಸಿ.ಟಿ.ರವಿ ಅವರ ದೂರನ್ನೂ ರಿಜಿಸ್ಟರ್ ಮಾಡಿಲ್ಲ; ನಮ್ಮೆಲ್ಲ ಕಾರ್ಯಕರ್ತರು ರಾತ್ರಿ ಪೊಲೀಸ್ ಠಾಣೆ ಮುಂದೆ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಸಿ.ಟಿ.ರವಿ ಅವರಿಗೆ ತಲೆಗೆ ಪೆಟ್ಟು ಬಿದ್ದಿದೆ. ಆಸ್ಪತ್ರೆಗೂ ಕರೆದುಕೊಂಡು ಹೋಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
 
ಸರಕಾರದ ಕುಮ್ಮಕ್ಕಿನಿಂದ ಅತಿರೇಕದ ವರ್ತನೆ ತೋರಿದ್ದಾರೆ ಎಂದ ಅವರು, ಸಿ.ಟಿ.ರವಿ ಅವರ ಹೇಳಿಕೆ ಕುರಿತು ಸಭಾಪತಿಯವರ ರೂಲಿಂಗ್ ಅನ್ನೂ ಗಮನಿಸಬೇಕಿದೆ. ತದನಂತರ ಸುವರ್ಣಸೌಧಕ್ಕೆ ನುಗ್ಗಿ ಗೂಂಡಾವರ್ತನೆ ಮಾಡಿದ್ದು, ಬಳಿಕ ಸಿ.ಟಿ.ರವಿ ಅವರನ್ನು ಹೊತ್ತಾಕಿಕೊಂಡು ಹೋಗಿದ್ದಾರೆ. ಸಿ.ಟಿ.ರವಿ ಅವರು ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರಿದ್ದು, ಅವರೊಬ್ಬ ಸಾಮಾನ್ಯ ವ್ಯಕ್ತಿ ಅಲ್ಲ; ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದವರು ಎಂದು ಗಮನ ಸೆಳೆದರು.
 
ನಿನ್ನೆ ಪೊಲೀಸ್ ಠಾಣೆಗೆ ಹೊತ್ತಾಕಿಕೊಂಡು ಹೋಗಿ ಗದಗ, ರಾಮದುರ್ಗ ಸೇರಿ ಬೇರೆಬೇರೆ ಕಡೆ ಅಲೆದಾಡಿಸಿ ಒಂದು ರೀತಿ ಟೆರರಿಸ್ಟ್ ಅಂದುಕೊಳ್ಳುವಂತೆ ಮಾಡಿದ್ದಾರೆ. ಟೆರರಿಸ್ಟ್ ಅನ್ನು ಪೊಲೀಸರು ಕರೆದೊಯ್ದಿದ್ದಾರೆಂಬ ಭಾವನೆ ಬರುತ್ತಿದೆ. ಸರಕಾರದ ಕುಮ್ಮಕ್ಕಿನಿಂದ ಆ ರೀತಿ ವರ್ತನೆ ನಡೆದಿದೆ ಎಂದು ಖಂಡಿಸಿದರು.
 
ರವಿ ಅವರನ್ನು ಸುಮಾರು 450 ಕಿಮೀನಿಂದ 500 ಕಿಮೀ ಸುತ್ತಾಡಿಸಿದ್ದಾರೆ. ಇವರೇನು ಮಾಡಲು ಹೊರಟಿದ್ದಾರೆ? ಒಬ್ಬ ಜನಪ್ರತಿನಿಧಿಯನ್ನು ನಡೆಸಿಕೊಳ್ಳುವ ರೀತಿಯೇ ಇದು? ಪೊಲೀಸರ ಮೇಲೆ ಒತ್ತಾಯ, ಒತ್ತಡ ಹೇರಿ ದೌರ್ಜನ್ಯ ನಡೆಸುತ್ತಿದ್ದು, ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವತ್ತು ಪ್ರತಿಭಟನೆ ಆಯೋಜಿಸಿದ್ದೇವೆ ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments