Webdunia - Bharat's app for daily news and videos

Install App

ಚಪ್ಪರಿಸಿಕೊಂಡು ತಿನ್ನುವ ಕೇಕ್ ಗೂ ನಿಷೇಧದ ಭೀತಿ

Krishnaveni K
ಶುಕ್ರವಾರ, 30 ಆಗಸ್ಟ್ 2024 (10:41 IST)
Photo Credit: Facebook
ಬೆಂಗಳೂರು: ಬರ್ತ್ ಡೇ ಇರಲಿ, ಆನಿವರ್ಸರಿ ಇರಲಿ, ಏನೇ ಸಂಭ್ರಮವಿದ್ದಾಗ ಕೇಕ್ ಕಟ್ ಮಾಡಿ ಸಂಭ್ರಮಿಸುವುದು ಸಹಜ. ಆದರೆ ಸಂಭ್ರಮದ ನೆಪದಲ್ಲಿ ನೀವು ಚಪ್ಪರಿಸಿಕೊಂಡು ತಿನ್ನುವ ಕೇಕ್ ಗೆ ಸದ್ಯದಲ್ಲೇ ನಿಷೇಧವಾದರೂ ಅಚ್ಚರಿಯಿಲ್ಲ.

ಕೆಲವು ದಿನಗಳ ಹಿಂದೆ ಆರೋಗ್ಯ ಇಲಾಖೆ ಹಾನಿಕಾರಕ ಅಂಶ ಪತ್ತೆಯಾದ ಹಿನ್ನಲೆಯಲ್ಲಿ ಗೋಬಿ ಮಂಚೂರಿ, ಪಾನಿ ಪೂರಿಗೆ ಕಡಿವಾಣ ಹಾಕಿತ್ತು. ಕೃತಕ ಬಣ್ಣಗಳನ್ನು ಬಳಸದೇ, ಕೆಲವೊಂದು ಷರತ್ತುಗಳನ್ನು ಪಾಲಿಸಿದರೆ ಮಾತ್ರ ಮಾರಾಟಕ್ಕೆ ಅವಕಾಶ ಎಂದು ನಿಬಂಧನೆ ಹಾಕಿತ್ತು.

ಇದೀಗ ಕೇಕ್ ಗೂ ಅದೇ ಗತಿಯಾಗುವ ಸಾಧ್ಯತೆಯಿದೆ. ಕೇಕ್ ಕಲರ್ ಫುಲ್ ಆಗಿ ಕಾಣಲು ಬಣ್ಣದ  ಬಳಕೆ ಮಾಡಲಾಗುತ್ತದೆ. ಆದರೆ ಈಗ ರಾಜ್ಯ ಆರೋಗ್ಯ ಇಲಾಖೆ ಸುಮಾರು 264 ಕಡೆಗಳಿಂದ ಕೇಕ್ ಸ್ಯಾಂಪಲ್ ಪಡೆದುಕೊಂಡು ಪರೀಕ್ಷೆಗೊಳಪಡಿಸಲು ಕಳುಹಿಸಲಾಗಿದೆ. ಇವುಗಳಲ್ಲಿ ಹಾನಿಕಾರಕ ಅಂಶವಿದೆಯೇ ಎಂದು ಪತ್ತೆ ಹಚ್ಚಲಾಗುತ್ತಿದೆ.

ಒಂದು ವೇಳೆ ಹಾನಿಕಾರಕ ಅಂಶ ಪತ್ತೆಯಾದರೆ ಬೇಕರಿಯಲ್ಲಿ ಸಿಗುವ ಕೆಲವೊಂದು ಆಹಾರ ವಸ್ತುಗಳ ಮೇಲೂ ನಿರ್ಬಂಧ ಹೇರಬೇಕಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಒಂದು ವೇಳೆ ಹಾನಿಕಾರಕ ಅಂಶ ಪತ್ತೆಯಾದರೆ ಕೇಕ್ ಮಾರಾಟವಾಗಬಹುದಾದರೂ ಅದರಲ್ಲಿ ಮೊದಲಿನ ಸ್ವಾದ ಇರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments