Webdunia - Bharat's app for daily news and videos

Install App

ಪೆಟ್ರೋಲ್ ಬಂಕ್ ಮಾಲೀಕರಿಂದ ಮುಷ್ಕರಕ್ಕೆ ಕರೆ

Webdunia
ಸೋಮವಾರ, 30 ಮೇ 2022 (19:23 IST)
ನಾಳೆ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಎರಡು ಬಾರಿ ಟ್ಯಾಕ್ಸ್ ಕಡಿತ ಗೊಳಿಸಿದೆ. ಆದರೆ ಪ್ರತಿ ಬಾರಿ ಮುನ್ನ ಖರೀದಿಸಿಟ್ಟ ತೈಲಕ್ಕೆ ನೀಡಿದ ಟ್ಯಾಕ್ಸ್ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತೀ ಡೀಲರ್ಗಳಿಗೆ 7 ರಿಂದ 8 ಲಕ್ಷ ನಷ್ಟವಾಗಿದೆ. ಬೇಡಿಕೆಗೆ ತಕ್ಕಂತೆ ಪೆಟ್ರೋಲ್, ಡಿಸೇಲ್ ಪೂರೈಕೆ ಮಾಡದ ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ತೈಲ ಕಂಪನಿಗಳು ಮುಂಗಡ ಕಟ್ಟಿದ ಟ್ಯಾಕ್ಸ್ ಮರುಪಾವತಿ ಮಾಡಬೇಕು. ಈ ಹಿನ್ನಲೆ ತೈಲ ಖರೀದಿ ನಿಲ್ಲಿಸಿ ನಾಳೆ ಮುಷ್ಕರ ನಡೆಯಲಿದೆ. ಬೆಂಗಳೂರಿನ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಸಂಪೂರ್ಣ ಬೆಂಬಲ ನೀಡಿದ್ದು, ಶೆಲ್, ನಾಯರಾ ಖಾಸಗಿ ಪೆಟ್ರೋಲಿಯಂ ಕಂಪನಿಗಳೂ ಭಾಗಿಯಾಗಲಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments