Webdunia - Bharat's app for daily news and videos

Install App

ಇನ್ಮುಂದೆ ಕಾವೇರಿ ನೀರು ಇನ್ನಷ್ಟು ಕಾಸ್ಟ್ಲಿ…!

Webdunia
ಶನಿವಾರ, 10 ಜೂನ್ 2023 (20:11 IST)
ರಾಜಧಾನಿ ಜನರಿಗೆ ಶಾಕ್ ಮೇಲೆ ಶಾಕ್ ಕಾಡ್ತಾನೇ ಇದೆ. ಶ್ರೀ ಸಾಮಾನ್ಯ, ಮಧ್ಯಮ ವರ್ಗದ ಜನರಂತೂ ಈ ದುನಿಯಾದಲ್ಲಿ ಜೀವನ ಮಾಡೋಕೆ ಆಗ್ತಾನೇ ಇಲ್ಲ. ಎಲ್ಲವೂ ತುಂಬಾನೇ ಕಾಸ್ಟ್ಲಿ ಆಗೋಗ್ಬಿಟ್ಟಿದೆ.. ಯೆಸ್ ಸರ್ಕಾರಿ ಇಲಾಖೆಗಳಂತೂ ನಷ್ಟದ ನೆಪವೊಡ್ಡಿ ಕರೆಂಟ್ ದರ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನ ಏರಿಕೆ ಮಾಡ್ತಾನೇ ಬಂದಿದೆ. ಆದ್ರೆ ಈಗ ಬೆಂಗಳೂರು ಜಲಮಂಡಳಿಯ ಸರದಿ.ಸ್ಕಾಂಗಳಂತೆ ಬೆಂಗಳೂರು ಜಲಮಂಡಳಿಗೂ ನೀರಿನ ದರ ಏರಿಕೆಗೆ ಅನುಮತಿ ನೀಡುವಂತೆ ಸರ್ಕಾರದ ಬಳಿ ಮನವಿ ಮಾಡಿಕೊಂಳ್ಳಲಿದೆ ಅಂತೇ.. ಈಗಾಗ್ಲೇ ಡಿ ಸಿ ಎಂ ಡಿ. ಕೆ ಶಿವಕುಮಾರ್ ಜೊತೆ ಸಭೆ ನಡೆಸಿದ ಜಲಮಂಡಳಿಯ ಅಧಿಕಾರಿಗಳು ದರ ಪರಿಷ್ಕರಣೆಯ ವಿಷಯ ಪ್ರಸ್ತಾಪಿಸಿದ್ದಾರಂತೆ.ಈ ಹಿಂದೆ 2014ರಲ್ಲಿ ನೀರಿನ ದರವನ್ನ ಏರಿಸಿತ್ತು. ಅದಕ್ಕೂ ಮುನ್ನ 2009ರಲ್ಲಿ ನೀರಿನ ದರ ಏರಿಕೆಯ ಶಾಕ್ ಅನ್ನ ನೀಡಿತ್ತು. ಆಗೊಮ್ಮೆ ಹೀಗೊಮ್ಮ ದರ ಏರಿಸಿದ್ರೆ, ಹೊಸ ಯೋಜನೆಗಳು ಕೈಗೊಳ್ಳುವುದು ಕಷ್ಟ. ಆಡಳಿತ ನಿರ್ವಹಣೆ ವೆಚ್ಚಗಳನ್ನು ಸರಿದೂಗಿಸಲು ಸವಾಲು ಹೀಗಾಗಿ ನೀರಿನ ದರ ಹೆಚ್ಚಳಕ್ಕೆ ಅವಕಾಶ ಕೊಡಿ ಅಂತ ಬೆಂಗಳೂರು ಜಲಮಂಡಳಿ ಸರ್ಕಾರದ ಬಳಿ ವಾದ ಮಂಡಿಸುತ್ತಿದೆ.

ಮಂಡಳಿಯ ತಿಂಗಳ ಆದಾಯ ಸುಮಾರು 110 ಕೋಟಿ ರೂ. ಆದ್ರೆ ನೀರು ಪಂಪ್ ಮಾಡಲು ಜಲಮಂಡಳಿ 78 ಕೋಟಿ ವಿದ್ಯುತ್ ಶುಲ್ಕ ಭರಿಸುತ್ತೆ. ಸಿಬ್ಬಂದಿ ವೇತನ, ದುರಸ್ಥಿ, ಪೈಪ್ ಗಳ ಬದಲಾವಣೆ, ಹೊಸ ಯೋಜನೆ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ಉಳಿದ ಮೊತ್ತ ಸಾಲುವುದಿಲ್ಲ. 1998ರ ಸಂದರ್ಭದಲ್ಲಿ ತಿಂಗಳಿಗೆ 3 ಕೋಟಿ ಕರೆಂಟ್ ಬಿಲ್ ಬರ್ತಾ ಇದ್ದು ಆದ್ರೀಗ ಸರಿಸುಮಾರು 70 ಕೋಟಿ. ರೂ ದಾಟಿದೆ. ಪ್ರತಿ ವರ್ಷ ವಿದ್ಯುತ್ ಬಿಲ್ ಜಾಸ್ತಿ ಆಗ್ತಿದೆ. ಅದಕ್ಕೆ ತಕ್ಕಂತೆ, ನೀರಿನ ದರ ಕೂಡ ಪರಿಷ್ಕರಣೆ ಆಗಬೇಕಿದೆ. ಹೀಗಾಗಿ ಈ ಬಾರಿ ನೀರಿನ ದರ ಹೆಚ್ಚಳಕ್ಕೆ ಬೆಂಗಳೂರು ಜಲಮಂಡಳಿ ಸರ್ಕಾರ ಮೊರೆ ಹೋಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments