Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಆರ್ ಆರ್ ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಪೌಂಡೇಷನ್ ಮೇಲೆ ಸಿಬಿಐ ದಾಳಿ ನಡೆಸಿದೆ.ಡಿಕೆಶಿ ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ. ಶೈಕ್ಷಣಿಕ ಸಂಸ್ಥೆಗೆ ಡಿಕೆಶಿ ಮಗಳು ಐಶ್ವರ್ಯ ಕಾರ್ಯದರ್ಶಿಯಾಗಿದ್ದಾರೆ. ಸಾರ್ವಜನಿಕ ಹಣವನ್ನ ದುರ್ಬಳಕೆ ಮಾಡಿಕೊಂಡ ಆರೋಪ ಎದುರಿಸುತ್ತಿದ್ದಾರೆ. ಡಿಕೆಶಿ ಒಡೆತನದ ಈ ಹಿಂದೆ ಸಿಬಿಐ ದಾಳಿ ನಡೆಸಿ ಮಹತ್ವದ ದಾಖಲಾತಿ ವಶಪಡಿಸಿಕೊಂಡಿತ್ತು.ಕೆಲವು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.