Webdunia - Bharat's app for daily news and videos

Install App

ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ

Krishnaveni K
ಶುಕ್ರವಾರ, 11 ಏಪ್ರಿಲ್ 2025 (12:10 IST)
ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ.
 
ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಡಾ. ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ ಸಂದರ್ಭದಲ್ಲಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟ ಸಂಗತಿಯನ್ನು, ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರಕಾರಕ್ಕೆ ಬಾರದಂತೆ ತಡೆದುದನ್ನು ತಿಳಿಸುತ್ತೇವೆ ಎಂದರು.

ದಲಿತರ ಮೀಸಲಾತಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ವಿರೋಧಿಸಿದ್ದನ್ನು ಜನರ ಮುಂದೆ ತೆರೆದಿಡುತ್ತೇವೆ. ಈಗಲೂ ಖರ್ಗೆಯವರಿಗೆ ಅವಮಾನ ಮಾಡಿದ್ದನ್ನೂ ತಿಳಿಸುತ್ತೇವೆ ಎಂದರು.
ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮ ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭೇಟಿಯ 100 ವರ್ಷ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಸರಕಾರ ಈ ಕಾರ್ಯಕ್ರಮ ಮಾಡಿದ್ದರೆ ನಾವು ಮಾಡುತ್ತಿರಲಿಲ್ಲ. ಇದು ನಮ್ಮ ಬದ್ಧತೆ ಎಂದು ತಿಳಿಸಿದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments