Webdunia - Bharat's app for daily news and videos

Install App

ನಾಳೆ ಚಾಮರಾಜಪೇಟೆ ಬಂದ್!?

Webdunia
ಸೋಮವಾರ, 11 ಜುಲೈ 2022 (14:28 IST)
ಬೆಂಗಳೂರು : ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿಂದತೆ ನಾಳೆ ಚಾಮರಾಜಪೇಟೆ ಬಂದ್ಗೆ ಕರೆ ಕೊಡಲಾಗಿದೆ.

ಹೌದು. ನಾಳೆ ಬೆಳಗ್ಗೆ 8 ರಿಂದ ಸಂಜೆ 5 ಗಂಟೆ ತನಕ ಚಾಮರಾಜಪೇಟೆ ಬಂದ್ ಮಾಡುವಂತೆ ನಾಗರೀಕ ಒಕ್ಕೂಟ ಕರೆ ಕೊಟ್ಟಿದೆ. ಪ್ರತಿಭಟನೆಗೆ ಹಿಂದೂ ಸಂಘಟನೆಗಳು ಕೂಡ ಸಾಥ್ ನೀಡುತ್ತಿವೆ. ಈ ಮೂಲಕ ಬಂದ್ ತೀವೃಗೊಳಿಸಲು ಸಂಘಟನೆಗಳು ಕೂಡ ಮುಂದಾಗಿವೆ.

ಚಾಮರಾಜಪೇಟೆ ವಕ್ಫ್ ಗೆ ಸೇರಬಾರದು ಅದು ಆಟದ ಮೈದಾನವಾಗಿಯೇ ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ಈ ಬಂದ್ ನಡೆಯಲಿದೆ.

ವ್ಯಾಪಾರ ಚಟುವಟಿಕೆಯ ಕೇಂದ್ರವಾಗಿರುವ ಬೆಂಗಳೂರಿನ ಚಾಮರಾಜಪೇಟೆ ಬಂದ್ಗೆ ಈಗಾಗಲೇ ನಾಗರೀಕ ಒಕ್ಕೂಟ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಈಗಾಗಲೇ ಎಲ್ಲಾ ಅಂಗಡಿ ಮುಗ್ಗಟ್ಟು ಮನೆ ಮನೆಗಳಿಗೆ ಕರ ಪತ್ರ ಹಂಚಲಾಗಿದೆ.

ಚಾಮರಾಜಪೇಟೆ ಅಂಗಡಿಗಳ ಗೋಡೆ, ಬ್ಯಾಂಕ್ಗಳ ಮುಂದೆ ಮುಂದೆ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವಂತೆ ಪೋಸ್ಟರ್ ಅಂಟಿಸಲಾಗಿದೆ. ಆಟೋಗಳ ಮೂಲಕ ಬಂದ್ ಬಗ್ಗೆ ಅನೌನ್ಸ್ಮೆಂಟ್ ಮಾಡಲಾಗುತ್ತಿದೆ. ಇಷ್ಟು ಮಾತ್ರವಲ್ಲದೆ ಬಿಬಿಎಂಪಿ ಕಚೇರಿಗೂ ಬಿತ್ತಿ ಪತ್ರ ಅಂಟಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇಂದಿನಿಂದಲೇ ಕಣ್ಗಾವಲು ಇರಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments