Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಚಾಮುಂಡಿ ತಾಯಿಯ ಶಾಪ: ಮುಡಾ ಹಗರಣ ಹೊರಬೀಳಲು ಅದೊಂದೇ ತಪ್ಪು ಕಾರಣವಾಯ್ತಾ

Krishnaveni K
ಸೋಮವಾರ, 12 ಆಗಸ್ಟ್ 2024 (08:50 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಇದೀಗ ಮುಡಾ ಹಗರಣದ ಉರುಳಿನಲ್ಲಿ ಒದ್ದಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಲು ಚಾಮುಂಡಿ ತಾಯಿಯ ಶಾಪವೇ ಕಾರಣವಾಯಿತೇ ಎಂಬ ಗುಸು ಗುಸು ಶುರುವಾಗಿದೆ.

ಇದೇ ವರ್ಷ ಮಾರ್ಚ್ ನಲ್ಲಿ ಸಿದ್ದು ಸರ್ಕಾರ ಚಾಮುಂಡಿ ಬೆಟ್ಟದ ಸಂಪೂರ್ಣ ಹೊಣೆಯನ್ನು ರಾಜಮನೆತನದಿಂದ ಸರ್ಕಾರದ ನಿಯಂತ್ರಣಕ್ಕೆ ತರುವಂತಹ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮದ ಹೊಸ ಕಾಯ್ದೆ ಜಾರಿಗೆ ತರಲಾಗಿತ್ತು. ಅದರಂತೆ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಗಳು, ಅಭಿವೃದ್ಧಿ ಕಾರ್ಯಗಳಲ್ಲಿ ರಾಜಮನೆತನದ ಮಧ್ಯಸ್ಥಿಕೆಯಿಲ್ಲದೇ ನೇರವಾಗಿ ಸರ್ಕಾರವೇ ನಿಯಂತ್ರಿಸುವಂತಹ ಕಾಯಿದೆ ಇದಾಗಿತ್ತು.

ಮೈಸೂರು ಚಾಮುಂಡಿ ಸನ್ನಿಧಿ ಮತ್ತು ರಾಜಮನೆನತಕ್ಕಿರುವ ನಂಟು ಇಂದು ನಿನ್ನೆಯದಲ್ಲ. ಈಗಲೂ ರಾಜಮನೆತನವೆಂದರೆ ಮೈಸೂರು ಜನರಲ್ಲಿ ಒಂದು ರೀತಿ ಗೌರವವಿದೆ. ಆದರೆ ಸಿದ್ದು ಸರ್ಕಾರ ಹಳೆಯ ಪದ್ಧತಿಗೆ ತಿಲಾಂಜಲಿ ಇಟ್ಟು ಚಾಮುಂಡಿ ತಾಯಿಯ ಸನ್ನಿಧಿಯ ಸಂಪೂರ್ಣ ನಿಯಂತ್ರಣವನ್ನು ತನ್ನ ವಶಕ್ಕೆ ಪಡೆಯಲು ಕಾನೂನು ರೂಪಿಸಿದ್ದೇ ಅವರಿಗೆ ಮುಳುವಾಯಿತೇ ಎಂಬ ಅನುಮಾನ ಶುರುವಾಗಿದೆ. ಚಾಮುಂಡೇಶ್ವರಿ ತಾಯಿಯ ಆಸ್ತಿಗೆ ಕೈ ಹಾಕಿದ್ದಕ್ಕೇ ಸಿದ್ದರಾಮಯ್ಯಗೆ ಈ ಗತಿ ಬಂದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಶತಮಾನಗಳಿಂದಲೂ ನಡೆದುಕೊಂಡು ಬಂದ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು ಚಾಮುಂಡಿ ಬೆಟ್ಟದಲ್ಲಿ ಸರ್ಕಾರದ ನಿಯಂತ್ರಣಕ್ಕೆ ಕೈ ಹಾಕಿದ್ದಕ್ಕೆ ಚಾಮುಂಡಿ ತಾಯಿಯೇ ಸಿದ್ದರಾಮಯ್ಯ ಮುಡಾ ಹಗರಣದ ಕಂಟಕ ತಂದೊಡ್ಡಿರಬಹುದು ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments