Webdunia - Bharat's app for daily news and videos

Install App

ವಾರದೊಳಗೆ ಚನ್ನಪಟ್ಟಣ ಅಭ್ಯರ್ಥಿ ಹೆಸರು ಫೈನಲ್: ಕುಮಾರಸ್ವಾಮಿ

Sampriya
ಶನಿವಾರ, 12 ಅಕ್ಟೋಬರ್ 2024 (15:45 IST)
ಬೆಂಗಳೂರು:  ರಾಜ್ಯದಲ್ಲಿ  ಚನ್ನಪಟ್ಟಣ ಉಪ ಚುನಾವಣೆ ಬಿಸಿ ಜೋರಾಗುತ್ತಿರುವ ಬೆನ್ನಲ್ಲೇ ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಅಭ್ಯರ್ಥಿಯನ್ನು ಫೈನಲ್ ಮಾಡುವುದಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಬಿಡದಿ ತೋಟದ ಮನೆಯಲ್ಲಿ ಚನ್ನಪಟ್ಟಣ ಭಾಗದ ಮುಖಂಡರು, ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್  ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್‌ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರ ಸಹಮತದೊಂದಿಗೆ ಅವರ ಅಭಿಪ್ರಾಯ ಪಡೆದು ತೀರ್ಮಾನ ಮಾಡೋಣ ಎಂದು ಹೇಳಿದ್ದೇನೆ.

ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುವ ಒತ್ತಾಯ ಬಗ್ಗೆ ಪ್ರತಿಕ್ರಿಯಿಸಿದ ಅವರು,  ನಿಖಿಲ್ ಸ್ಪರ್ಧಿಸಬೇಕೆಂಬುದು 95% ನಾಯಕರು, ಮುಖಂಡರು ಅಭಿಪ್ರಾಯವಾಗಿದೆ. ಆದರೆ ನಾವು ಎಲ್ಲ ಸನ್ನಿವೇಶಗಳ ಬಗ್ಗೆ ತಿಳಿದು ನಿರ್ಧಾರವನ್ನು ಕೈಗೊಳ್ಳುತ್ತೇವೆ. ಚನ್ನಪಟ್ಟಣದಲ್ಲಿ ನನಗೆ ಎನ್‌ಡಿಎ ಅಭ್ಯರ್ಥಿ ಗೆಲ್ಲಲೇಬೇಕು. ನಿಖಿಲ್ ಅಥವಾ ಬೇರೆ ಅವರು ಅಭ್ಯರ್ಥಿ ಅನ್ನೋದಕ್ಕಿಂತ ಹೆಚ್ಚಾಗಿ ಎನ್‌ಡಿಎ ಅಭ್ಯರ್ಥಿ ಗೆಲುವು ಮುಖ್ಯ ಎಂದರು.

ಆದ್ದರಿಂದ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments