Webdunia - Bharat's app for daily news and videos

Install App

ನಾಗೇಂದ್ರರನ್ನು ಎಸ್‌ಐಟಿ, ಸಿಐಡಿ ಬಿಟ್ರೂ, ಕೋರ್ಟ್ ಬಿಡಲ್ಲ: ಬಿಜೆಪಿ

Sampriya
ಗುರುವಾರ, 10 ಏಪ್ರಿಲ್ 2025 (15:35 IST)
Photo Courtesy X
ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಸಂಬಂದ ನಾಗೇಂದ್ರ ಸೇರಿದಂತೆ ಮೂವರಿಗೆ 1.25 ಕೋಟಿ ರೂ ದಂಡ ಪಾವತಿಸುವಂತೆ  ಸೂಚಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ದಂಡ ಪಾವತಿಸದಿದ್ದಲ್ಲಿ, ಒಂದು ವರ್ಷ ಜೈಲು ಶಿಕ್ಷೆ ಅನುಭವಿಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಮಾಜಿ ಸಚಿವ ಬಿ.ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ವಿರುದ್ಧ ವಿಎಸ್‌ಎಲ್ ಸ್ಟೀಲ್ಸ್ ಸಂಸ್ಥೆಯು ಚೆಕ್‌ಬೌನ್ಸ್ ಕೇಸ್ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ತೀರ್ಪು ಪ್ರಕಟಿಸಿದೆ.


ದೂರುದಾರ ವಿಎಸ್ಎಲ್ ಸ್ಟೀಲ್ಸ್ ಸಂಸ್ಥೆಯೊಂದಿಗೆ ಆರೋಪಿಗಳ ಪಾಲುದಾರಿಕೆಯ ಬಿ.ಸಿ.ಇನ್ಫ್ರಾಸ್ಟ್ರಕ್ಚರ್ ಆ್ಯಂಡ್‌ ರಿಸೋರ್ಸ್ ಕಂಪನಿ ನಡುವೆ ಹಣಕಾಸು ವ್ಯವಹಾರ ಇತ್ತು. 2013ರಿಂದ ಹಣಕಾಸು ವಿವಾದ ಉಂಟಾಗಿದ್ದು, ಒಟ್ಟು 2.53 ಕೋಟಿ ರು. ಪಾವತಿಸಬೇಕಿತ್ತು. ಒಂದು ಕೋಟಿ ರು. ಚೆಕ್‌ ನೀಡಲಾಗಿತ್ತು. ಆದರೆ, 2022 ರಲ್ಲಿ ಚೆಕ್‌ಬೌನ್ಸ್‌ ಆಗಿರುವ ಸಂಬಂಧ ವಿಎಸ್ಎಲ್ ಸ್ಟೀಲ್ಸ್ ಸಂಸ್ಥೆಯು ಪ್ರಕರಣ ದಾಖಳಿಸಿತ್ತು.

ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ ತೀರ್ಪು ಹೊರಡಿಸಿದೆ.  ಇದರಲ್ಲಿ 10 ಸಾವಿರ ರು. ಸರ್ಕಾರಕ್ಕೆ ಉಳಿದ ಹಣ ದೂರುದಾರ ಕಂಪನಿಗೆ ಪಾವತಿಸಬೇಕು ಎಂದು ತಿಳಿಸಿದೆ. ದಂಡ ಪಾವತಿಸುವಲ್ಲಿ ತಪ್ಪಿದರೆ ಒಂದು ವರ್ಷ ಸೆರೆವಾಸದ ಶಿಕ್ಷೆ ಅನುಭವಿಸಬೇಕು ಎಂದು ಹೇಳಿದೆ.

ಈ ಸಂಬಂಧ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡು ರಾಜ್ಯದ ಎಸ್‌ಐಟಿ, ಸಿಐಡಿ ನಾಗೇಂದ್ರ ಅವರನ್ನು ಬಿಟ್ಟರೂ ನ್ಯಾಯಾಲಯ ಬಿಡುವುದಿಲ್ಲ ಎಂದು ವ್ಯಂಗ್ಯ ಮಾಡಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments