ಚಿಕ್ಕಮಗಳೂರಿನಲ್ಲಿ ಗಾಳಿಸಹಿತ ಮಳೆ ಅಬ್ಬರ

Webdunia
ಶುಕ್ರವಾರ, 12 ಆಗಸ್ಟ್ 2022 (17:45 IST)
ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಈಗಾಗಲೇ ಮಳೆಯ ಅಬ್ಬರಕ್ಕೆ ಅಪಾರ ಆಸ್ತಿಪಾಸ್ತಿ ಹಾಗೂ ಸಾವು ನೋವುಗಳು ಸಂಭವಿಸಿದೆ. ಮಳೆ ಮುಂದುವರಿಯುವ ಹಿನ್ನೆಲೆ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿಯಿಂದ ಹತ್ತನೇ ತರಗತಿವರೆಗೆ ರಜೆ ನೀಡಿ ತಹಶೀಲ್ದಾರ್‌ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಗೆ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಗ್ರಾಮ ರಸ್ತೆ ಬಿರುಸಿನಿಂದ ಹರಿಯುತ್ತಿರುವ ಮಳೆಗೆ ಕೊಚ್ಚಿ ಹೋಗಿದ್ದು, ಮೇಗೂರು, ಕೊಗ್ರೆ, ತಲವಾನೆ ಸೇರಿ ಹತ್ತಾರು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇನ್ನು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಶಾಲಾ ಕಾಲೇಜಿಗೆ ತೆರಳಬೇಕಿದ್ದ ವಿದ್ಯಾರ್ಥಿಗಳು, ಕೆಲಸ ಕಾರ್ಯಗಳಿಗೆ ಹೋಗಬೇಕಿದ್ದ ಜನಸಾಮಾನ್ಯರು ಪರದಾಟ ಅನುಭವಿಸಿದ್ದು, PWD ಇಂಜಿನಿಯರ್ ಅವರನ್ನ ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮುಂದಿನ ಸುದ್ದಿ
Show comments