Webdunia - Bharat's app for daily news and videos

Install App

ನಿಧಿ ಆಸೆಗೆ ಜ್ಯೋತಿಷಿ ಮಾತು ಕೇಳಿ ಅಮಾಯಕನನ್ನೇ ಬಲಿ ಕೊಟ್ಟ ಪಾಪಿಗಳು

Krishnaveni K
ಬುಧವಾರ, 12 ಫೆಬ್ರವರಿ 2025 (10:26 IST)
ಚಿತ್ರದುರ್ಗ: ಪಶ್ಚಿಮ ದಿಕ್ಕಿಗೆ ಹೋಗಿ ನರಬಲಿ ಕೊಟ್ಟರೆ ನಿಧಿ ಸಿಗುತ್ತದೆ ಎಂಬ ಜ್ಯೋತಿಷಿ ಮಾತು ಕೇಳಿ ಪಾಪಿಯೊಬ್ಬ ಅಮಾಯಕನನ್ನು ಕೊಚ್ಚಿ ಹತ್ಯೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಪರುಶುರಾಂ ಪುರ ಠಾಣಾ ವ್ಯಾಪ್ತಿಯ 50 ವರ್ಷದ ಬಿಎಚ್ ಪ್ರಭಾಕರ್ ಎಂಬಾತ ಕೊಲೆಗೀಡಾತ. ಆನಂದ್ ಎಂಬಾತ ಜ್ಯೋತಿಷಿ ಮಾತು ಕೇಳಿ ಕೊಲೆ ಮಾಡಿದ ಪಾಪಿ. ಈತ ಆಂಧ್ರಪ್ರದೇಶದ ಹೋಟೆಲ್ ಒಂದರಲ್ಲಿ ನೌಕರನಾಗಿದ್ದ.

ಇತ್ತೀಚೆಗೆ ಈತನಿಗೆ ಹಣಕಾಸಿನ ಮುಗ್ಗಟ್ಟು ಎದುರಾಗಿತ್ತು. ಈ ಸಂಬಂಧ ಆತ ಜ್ಯೋತಿಷಿಯ ಮೊರೆ ಹೋಗಿದ್ದ. ಜ್ಯೋತಿಷಿ ನರಬಲಿ ನೀಡುವಂತೆ ಸಲಹೆ ನೀಡಿದ್ದ. ಆತನ ಮಾತು ನಂಬಿ ಪ್ರಭಾಕರ್ ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ.

ಪರಶುರಾಂಪುರ ಕಡೆಗೆ ಬಂದಿದ್ದ ಆರೋಪಿ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕೆಲಸ ಮಾಡುತ್ತಿದ್ದ ಬಡ ಪ್ರಭಾಕರ್ ನನ್ನು ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ನಲ್ಲಿ ಕರೆದೊಯ್ದಿದ್ದ. ಬಳಿಕ ಪಶ್ಚಿಮ ದಿಕ್ಕಿಗೆ ಕರೆದುಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಇದೀಗ ಹಂತಕ ಆನಂದ್ ರೆಡ್ಡಿ ಮತ್ತು ಆತನಿಗೆ ಸಲಹೆ ನೀಡಿದ ಜ್ಯೋತಿಷಿ ಇಬ್ಬರನ್ನೂ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments