Webdunia - Bharat's app for daily news and videos

Install App

ಚಿತ್ರದುರ್ಗಾ: ನಿಂತಿದ್ದ ಲಾರಿಗೆ ಎರಡು ಲಾರಿಗಳು ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

Sampriya
ಬುಧವಾರ, 5 ಮಾರ್ಚ್ 2025 (16:29 IST)
ಚಿತ್ರದುರ್ಗ: ತಾಲ್ಲೂಕಿನ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಗಾತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಇಂದು ನಡೆದಿದೆ.

ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಇನ್ನೆರಡು ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಆಂಧ್ರಪ್ರದೇಶ, ತಾಡಪತ್ರಿ ಗ್ರಾಮದ ಶೇಖರ್‌ (55), ತಮಿಳುನಾಡು, ಧರ್ಮಪುರಿಯ ಪೆರಿಯಸ್ವಾಮಿ (50), ಉತ್ತರ ಪ್ರದೇಶ, ಅಲಿಗಡದ ಜಬರುದ್ದೀನ್‌ (52) ಎಂದು ಗುರುತಿಸಲಾಗಿದೆ.

ಲಾರಿಗಳು ಮುಂಬೈನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದವು. ಬಟ್ಟೆ ತುಂಬಿದ್ದ ಲಾರಿ ಟೈರ್‌ ಸ್ಫೋಟಗೊಂಡಿದ್ದರಿಂದ ರಸ್ತೆ ಬದಿಯಲ್ಲಿ ಟೈಯರ್‌ ಅನ್ನು ಚಾಲಕರು ಬದಲಾವಣೆ ಮಾಡುತ್ತಿದ್ದರು.

ಹಿಂದಿನಿಂದ ಬಂದ ಭತ್ತ ತುಂಬಿದ್ದ ಲಾರಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿದೆ. ಭತ್ತ ತುಂಬಿದ್ದ ಲಾರಿಗೆ ಹಿಂದಿನಿಂದ ಬಂದ ಕಲ್ಲಂಗಡಿ ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮೂರೂ ವಾಹನಗಳ ಚಾಲಕರು ಸ್ಥಳದಲ್ಲೇ ಮೃತಪಟ್ಟರು.

ಅಪಘಾತದ ನಂತರ ರಸ್ತೆಯಲ್ಲಿ ಬಟ್ಟೆ, ಭತ್ತ, ಕಲ್ಲಂಗಡಿ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments