Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಆರಂಭಿಸಿದ ನರೇಂದ್ರ ಮೋದಿ ಕರ್ನಾಟಕದ ನನ್ನ ಪ್ರೀತಿಯ ಬಂಧು ಭಗಿನಿಯರೇ ನಿಮಗೆಲ್ಲಾ ಪ್ರೀತಿಯ ನಮಸ್ಕಾರಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು.
ನಾಡಪ್ರಭು ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ಸಂತ ಶಿಶುನಾಳ್ ಷರೀಫ್ ಮಾದಾರ ಚೆನ್ನಯ್ಯ ಅವರನ್ನು ಸ್ಮರಿಸಿ ಬೃಹತ್ ರ್ಯಾಲಿಯನ್ನುದ್ದೇಶಿಸಿ ಬೆಂಗಳೂರಿನ ಅರಮನೆಯಲ್ಲಿ ಮೈದಾನದಲ್ಲಿ ಭಾಷಣ ಮಾಡಿದರು.
ಕರ್ನಾಟಕ ರಾಜ್ಯದಲ್ಲಿ ಪರಿವರ್ತನೆಗಾಗಿ ಬಿಜೆಪಿಯನ್ನು ಗೆಲ್ಲಿಸಿ. ನಾನು ಕರ್ನಾಟಕ್ಕೆ ಈ ಮೊದಲು ಆಗಮನಿಸಿದ್ದೆ. ಆದರೆ ಇಂಥ ದೃಶ್ಯ ನೋಡೋ ಸೌಭಾಗ್ಯ ನನಗೆ ಸಿಕ್ಕಿರಲಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ನ ಪತನಕ್ಕೆ ಕ್ಷಣಗಣನೆ ಶುರುವಾಗಿದೆ ಎಂದಿದ್ದಾರೆ ನರೇಂದ್ರ ಮೋದಿ.