Webdunia - Bharat's app for daily news and videos

Install App

ಮುಡಾ ಅಧಿಕಾರಿಗಳಿಂದ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು

Webdunia
ಶನಿವಾರ, 18 ಡಿಸೆಂಬರ್ 2021 (20:48 IST)
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಎರಡು ಶೆಡ್‌ಗಳನ್ನು ಶನಿವಾರ ಬೆಳಗ್ಗೆ ತೆರೆವುಗೊಳಿಸಿದ ಪ್ರಾಧಿಕಾರದ ಅಧಿಕಾರಿಗಳು, ನೂರು ಕೋಟಿ ರೂ ಮೌಲ್ಯದ 5.14 ಜಮೀನನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ತಾಲ್ಲೂಕು ಕಸಬಾ ಹೋಬಳಿಯ ಬಸವನ ಹಳ್ಳಿ ಗ್ರಾಮದ ಸರ್ವೆ ನಂ 118ರ 5.14 ಎಕರೆ ಜಮೀನನ್ನು ಪ್ರಾಧಿಕಾರವು 1991 ರ ಡಿಸೆಂಬರ್ 23 ರಂದು ವಿಜಯ ನಗರ 4ನೇ, 2ನೇ ಘಟ್ಟದ ​​ನಿರ್ಮಾಣಕ್ಕಾಗಿ ಭೂಸ್ವಾಧೀನಪಡಿಸಿಕೊಂಡು ಪರಿಹಾರ ಮೊತ್ತವನ್ನು ಭೂಸ್ವಾಧೀನಪಡಿಸಿಕೊಂಡಿತು.
ಸದರಿ ಸ್ವತ್ತಮಗಮಿ ಭೂಮಾಲೀಕರಿಂದ ಒಪ್ಪಂದ ಮಾಡಿಕೊಂಡ ಮಹದೇವಯ್ಯ ಎಂಬವರು ಸಿವಿಲ್ ನ್ಯಾಯಾಲಯದಲ್ಲಿ ಅಸಲು ಹಾಕಿದ್ದರು. ವಿಚಾರಣೆ ನಡೆಸಿ ನ್ಯಾಯಾಲಯ ಸದರಿ ಜಮೀನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದೆ ಎಂದು ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ಇಂದು ಮುಂಜಾನೆ 6 ಗಂಟೆಗಳಲ್ಲಿ ಸೂಕ್ತ ಪೊಲೀಸ್ ರಕ್ಷಣೆಯೊಂದಿಗೆ ಜೆಸಿಬಿ ಯಂತ್ರಗಳ ಮೂಲಕ ಕಾರ್ಯಚರಣೆ ನಡೆಸಿದ ಪ್ರಾಧಿಕಾರದ ಅಧಿಕಾರಿಗಳು ನಿರ್ಮಿಸಿದ್ದಾರೆ 2 ಅನಧಿಕೃತ ಶೆಡ್‌ಗಳನ್ನು ಹೊಂದಿದ್ದು, ಜಮೀನನ್ನು ಪ್ರಾಧಿಕಾರದ ವಶಕ್ಕೆ ತೆಗೆದುಕೊಂಡಿದೆ, ಅಲ್ಲಿ ಫಲಕವನ್ನು ಅಳವಡಿಸಲಾಗಿದೆ. ಸದರಿ ಜಮೀನಿನಲ್ಲಿ
50*80 ಅಳತೆಯ 11 ನಿವೇಶನಗಳು, 40*60 ಅಳತೆಯ 36 ನಿವೇಶನಗಳು ರಚನೆಯಾಗಲಿವೆ. ಸದರಿ ಸ್ವತ್ತಿನ
ಮೌಲ್ಯದ ಸುಮಾರು 100 ಕೋಟಿಗಳಷ್ಟು ಎಂದು ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ ನಟೇಶ್ ಅವರು ಪ್ರಕಟಿಸಿದ್ದಾರೆ. ಕಾರ್ಯಚರಣೆ ವೇಳೆ ಪ್ರಾಧಿಕಾರದ ಅಧೀಕ್ಷಕ ಭೂ ಸ್ವಾಧೀನಾಧಿಕಾರಿ ಹರ್ಷವರ್ಧನ್, ಕಾರ್ಯಪಾಲಕ ಅಭಿಯಂತರುಗಳಾದ ಮೋಹನ್, ಸತ್ಯನಾರಾಯಣ ಜೋಷಿ, ವಲಯಾಧಿಕಾರಿಗಳಾದ ರವೀಂದ್ರಕುಮಾರ್, ಕಿರಣ್, ಶಿವಣ್ಣ, ನಾಗೇಶ್, ರವಿಶಂಕರ್. ಸಹಾಯಕ ಕಿರಿಯ ಅಭಿಯಂತರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ವರ್ಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments