Webdunia - Bharat's app for daily news and videos

Install App

ಮಳೆಗಾಗಿ ರಾಜ್ಯದಲ್ಲಿ ಮೋಡ ಬಿತ್ತನೆ.. ಹೇಗೆ ಮಾಡಲಾಗುತ್ತಿದೆ ಗೊತ್ತಾ..?

Webdunia
ಸೋಮವಾರ, 21 ಆಗಸ್ಟ್ 2017 (17:00 IST)
ಮಳೆಗಾಗಿ ರಾಜ್ಯ ಸರ್ಕಾರ ಉದ್ಧೇಸಿಸಿರುವ ಮೋಡ ಬಿತ್ತನೆ ಇವತ್ತಿನಿಂದ ಆರಂಭವಾಗಿದೆ. 36 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರ ಮೋಡ ಬಿತ್ತನೆಗೆ ಮುಂದಾಗಿದೆ. ಹೊಯ್ಸಳ ಕಂಪನಿ ಇದರ ಗುತ್ತಿಗೆ ಪಡೆದಿದೆ.

ಈಗಾಗಲೇ ಜಕ್ಕೂರು ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ವಿಮಾನಗಳು ಅಮೆರಿಕದಿಂದ ಬಂದು ಬೀಡು ಬಿಟ್ಟಿವೆ. ಎರಡು ವಿಮಾನಗಳು ಮೋಡ ಬಿತ್ತೆನೆ ಮಾಡಲಿವೆ. ಇವತ್ತು ಮಾಗಡಿ, ರಾಮನಗರದಲ್ಲಿ ಮೋಡಬಿತ್ತನೆ ಮಾಡಲಾಗುತ್ತಿದೆ.

ಮೋಡ ಬಿತ್ತನೆ ಹೇಗೆ..?: ಮಳೆ ಬೀಳುವ ಫಲವತ್ತಾದ ಮೋಡಗಳನ್ನ ಗುರುತಿಸಿ ಚಿತ್ರ ಸಮೇತ ಮಾಹಿತಿ ರವಾನೆಗೆ ಸುರಪುರ, ಗದಗ ಮತ್ತು ಬೆಂಗಳೂರಿನಲ್ಲಿ  ರಾಡಾರ್`ಗಳನ್ನ ಸ್ಥಾಪಿಸಲಾಗಿದೆ. ರಾಜ್ಯದ ಯಾವ ಭಾಗದಲ್ಲಿ ಮಳೆ ಸುರಿಸಬಲ್ಲ ಮೋಡಗಳಿವೆ ಎಂಬುದನ್ನ ಪತ್ತೆ ಹಚ್ಚಿ ಅಲ್ಲಿ ಮಾತ್ರ ಮೋಡ ಬಿತ್ತನೆ ಮಾಡಲಾಗುತ್ತದೆ.360 ಡಿಗ್ರಿ ರೇಡಿಯಸ್`ನಲ್ಲಿ 200 ಕಿ.ಮೀ ದೂರದಲ್ಲಿ ಮಳೆ ಸುರಿಸಬಲ್ಲಮೋಡಗಲ ಮಾಹಿತಿಯನ್ನ ರಾಡಾರ್ ನಿಯಂತ್ರಣ ಕೇಂದ್ರಕ್ಕೆ ರವಾನಿಸುತ್ತದೆ. ಬಳಿಕ ಮೋಡಬಿತ್ತನೆಯ ವಿಮಾನದಲ್ಲಿ ಹೊರಡುವ ಪೈಲಟ್ ಮಳೆ ಸುರಿಸಬಲ್ಲ ಮೋಡಗಳ ಮೇಲೆ ಸಿಲ್ವರ್ ಅಯೋಡೈಡ್`ಗಳನ್ನ ಸಿಂಪಡಿಸುತ್ತಾನೆ.1ರಿಂದ 10 ಮೈಕ್ರಾನ್ ಗಾತ್ರದ ಹನಿಗಳನ್ನ ಈ ಸಿಲ್ವರ್ ಅಯೋಡೈಡ್ ದೊಡ್ಡ ಹನಿಗಳಾಗಿ ಮಾಡುತ್ತದೆ. ಬಳಿಕ ಹನಿಗಳ ಗಾಳಿಯಲ್ಲಿ ಚೆದುರಿಹೋಗದೇ ಮಳೆ ಸುರಿಸುತ್ತವೆ.

ಮೋಡಬಿತ್ತನೆಯಿಂದ ಯಾವ ಪ್ರಮಾಣದಲ್ಲಿ ಮಳೆ ಸುರಿಸಬಹುದು ಎಂಬುದನ್ನ ಯಾವ ವಿಜ್ಞಾನಿಯೂ ಇದುವರೆಗೆ ಖಚಿತಪಡಿಸಿಲ್ಲ. ಈ ಹಿಂದೆ ಎಸ್.ಎಂ. ಕೃಷ್ಣ ಸಿಎಂ ಆಗಿದ್ದ ಕಾಲದಲ್ಲೂ ಮೋಡಬಿತ್ತನೆ ಮಾಡಲಾಗಿತ್ತು. ಆದರೆ, ಫಲ ಸಿಕ್ಕಿರಲಿಲ್ಲ ಎಂಬುದು ಗಮನಾರ್ಹ. ಆದರೆ, ಥೈಲ್ಯಾಂಡ್, ಚೀನಾ ರಾಷ್ಟ್ರಗಳಲ್ಲಿ ಮೋಡಬಿತ್ತನೆಗೆಂದೇ ಸಾವಿರಾರು ಕೋಟಿ ರೂ. ವ್ಯಯಿಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments