Webdunia - Bharat's app for daily news and videos

Install App

ಪ್ರತಾಪ್ ಸಿಂಹ ವಿರುದ್ಧ ಸಿಎಂ ಬೊಮ್ಮಾಯಿ ಸಿಡಿಮಿಡಿ!

Webdunia
ಗುರುವಾರ, 21 ಜುಲೈ 2022 (15:53 IST)
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ದಸರಾ ಮಹೋತ್ಸವಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ತಮ್ಮ ಕ್ಷೇತ್ರಕ್ಕೆ ಸಂಬಂಧ ಪಟ್ಟ ದಾಖಲೆಯೊಂದನ್ನು ಸಿಎಂಗೆ ನೀಡಿದ್ದಾರೆ. ಅದನ್ನು ಓದುವಾಗಲೇ ನಿಮ್ಮ ಜೊತೆಗೆ ಫೋಟೋ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಇದಕ್ಕೆ ಕೋಪಗೊಂಡ ಬೊಮ್ಮಾಯಿ ವಿಶ್ವಾಸ ಇಲ್ಲಾಂದ್ರೆ ಇದನ್ನು ವಾಪಸ್ ತಗೊಂಡು ಹೋಗು ಎಂದು ಗುಡುಗಿದ್ದಾರೆ.
ಬೊಮ್ಮಾಯಿ ಅವರ ಕೋಪ ಕಂಡ ಪ್ರತಾಪ್ ಸಿಂಹ, ನಿಮ್ಮ ಜೊತೆ ಒಂದು ಫೋಟೋ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಮತ್ತಷ್ಟು ಅಸಮಾಧಾನಗೊಂಡ ಸಿಎಂ ಬೊಮ್ಮಾಯಿ, 'ನನ್ ಜೊತೆ ಫೋಟೊ ಬೇಡ, ಅತಿ ಬುದ್ಧಿವಂತರ ಜೊತೆ ಕೆಲಸ ಮಾಡೋದೆ ಕಷ್ಟ ಎಂದು ಗುಡುಗಿದ್ದಾರೆ. ಸದ್ಯ ಸಿಎಂ ಬೊಮ್ಮಾಯಿಯ ಈ ನಡೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದೆ ಮತ್ತೊಂದೆಡೆ ಕಾಂಗ್ರೆಸ್ಸಿಗರು ಈ ಕುರಿತು ಟ್ರೋಲ್​ ಮಾಡುತ್ತಿದ್ದು ಪ್ರತಾಪ್​ ಸಿಂಹರಿಗೆ ಮುಜುಗರ ತಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments