Webdunia - Bharat's app for daily news and videos

Install App

ಶಾಸಕ ರಾಜುಗೌಡರಿಗೆ ಸಿಎಂ ಕ್ಲಾಸ್

Webdunia
ಭಾನುವಾರ, 9 ಅಕ್ಟೋಬರ್ 2022 (16:55 IST)
ಪರಿಶಿಷ್ಟ ಜಾತಿಗೆ ಮೀಸಲಾತಿ ಪ್ರಮಾಣ ಹೆಚ್ಚಾಗಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ಹಾಗೂ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಶ್ರಮ ದೊಡ್ಡದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಎಸ್​ಟಿ ಸಮುದಾಯ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ಕುರಿತು ಪ್ರತಿಕ್ರಿಯಿಸಿ, ಇದು ಹೋರಾಟದ ಗೆಲುವು. ಶ್ರೀಗಳ ಆಶೀರ್ವಾದದಿಂದ ಸಿಕ್ಕ ಗೆಲುವು ಎಂದು ಬಣ್ಣಿಸಿದರು. ಮುಂಬರುವ ಸವಾಲು ಎದುರಿಸಲು ನಿಮ್ಮ ಆಶೀರ್ವಾದ ಬೇಕು. ನಿಮ್ಮ ಆಶೀರ್ವಾದ ಸಿಗುತ್ತೆ ಎಂಬ ವಿಶ್ವಾಸವಿದೆ. ವಿಧಾನಸೌಧದ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ನ್ಯಾಯ ಸಮ್ಮತ ತೀರ್ಮಾನ ತೆಗೆದುಕೊಳ್ಳಲು ಸಹಕಾರ ಇರಲಿ ಎಂದು ಮನವಿ ಮಾಡಿದರು.
 
ಸಚಿವ ಶ್ರೀರಾಮುಲು ಮತ್ತು ಶಾಸಕ ರಾಜೂ ಗೌಡ ನನಗೆ ಶ್ರೀರಾಮಚಂದ್ರ ಎಂದಿದ್ದಾರೆ. ಆದರೆ ನಾನು ಶ್ರೀರಾಮಚಂದ್ರನ ಪಾದದ ದೂಳಿಗೂ ಸಮನಲ್ಲ. ದಯವಿಟ್ಟು ಹಾಗೆಲ್ಲ ಹೇಳಬೇಡಿ, ಶ್ರೀರಾಮನಿಗೆ ಯಾರೂ ಸರಿಸಾಟಿಯಲ್ಲ. ನ್ಯಾಯ, ನೀತಿ ಮತ್ತು ನಡತೆಯಲ್ಲಿ ಶ್ರೀರಾಮಚಂದ್ರ ಒಬ್ಬನೇ, ಅವನು ದೊಡ್ಡ ಆದರ್ಶ ಪುರುಷ ಎಂದರು.
 
ತಮ್ಮನ್ನು ಹೊಗಳಿದ ಶಾಸಕ ರಾಜೂಗೌಡ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ನೀನು ತಪ್ಪು ಮಾತಾಡಿದ್ಯಲೇ ರಾಜೂಗೌಡ. ನೀನು ಯಾರಿಗೂ ಗುಲಾಮ ಆಗಬೇಕಿಲ್ಲ. ಬದುಕು ಕೊಟ್ಟ ದೈವಕ್ಕೆ ಮಾತ್ರ ಗುಲಾಮನಾಗಬೇಕು. ಅಪ್ಪಿತಪ್ಪಿ ಇನ್ನೊಮ್ಮೆ ಆ ಶಬ್ದ ಬಂದರೆ ನಿನ್ನ ನಾನು ಬಿಡಲ್ಲ ಎಂದು ನಗುತ್ತಲೇ ಎಚ್ಚರಿಸಿದರು. ಪಾಪ ಅವನು ಭಾವನಾತ್ಮಕವಾಗಿ ಹೇಳಿದ್ದಾನೆ. ಆದರೆ ಭಾವನಾತ್ಮಕತೆಯ ಜೊತೆಗೆ ವಾಸ್ತವಾಂಶ ಮರೆಯಬಾರದು. ಮೀಸಲಾತಿ ಕೊಟ್ಟಿದ್ದು ನಾನಲ್ಲ, ರಾಜ್ಯದ ಜನತೆ. ಇದರ ಹಿಂದೆ ಬುದ್ಧ, ಬಸವ, ವಾಲ್ಮೀಕಿ ಅವರಂಥ ಮಹಾತ್ಮರ ಶಕ್ತಿಯಿದೆ. ಕೇವಲ ಬಾಯಿ ಮಾತಿನಿಂದ ಯಾವುದೇ ಕೆಲಸ ಆಗುವುದಿಲ್ಲ. ಅದಕ್ಕೆ ಬದ್ಧತೆ ಇರಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments