Publish Date: Sat, 17 Sep 2022 (18:31 IST)
Updated Date: Sat, 17 Sep 2022 (18:35 IST)
ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಜನತೆಯ ಪರವಾಗಿ ಜನ್ಮದಿನದ ಶುಭಾಶಯಗಳು. ಅವರಿಗೆ ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. BSY ಸಹ ನರೇಂದ್ರ ಮೋದಿಗೆ ಶುಭಾಶಯ ತಿಳಿಸಿದ್ದಾರೆ. ನಮ್ಮ ಪ್ರೀತಿಯ ನಾಯಕ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ನಾಯಕತ್ವ, ಬದ್ಧತೆ ಮತ್ತು ದೂರದೃಷ್ಟಿ ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತದೆ. ನಿಮ್ಮ ಉತ್ತಮ ಆರೋಗ್ಯ ಮತ್ತು ರಾಷ್ಟ್ರವನ್ನು ಮುನ್ನಡೆಸುವಲ್ಲಿ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುವೆ ಎಂದು ಮಾಜಿ ಸಿಎಂ B.S.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.