Publish Date: Fri, 27 Jul 2018 (10:29 IST)
Updated Date: Fri, 27 Jul 2018 (10:31 IST)
ಬೆಂಗಳೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದ ಸಿಎಂ ಕುಮಾರಸ್ವಾಮಿ ಇಂದೂ ಪೂಜೆ ಪುನಸ್ಕಾರಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ನಿನ್ನೆ ಎಚ್ ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ ಸೇರಿದಂತೆ ಇಡೀ ಕುಟುಂಬವರ್ಗವೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿತ್ತು. ಇಂದೂ ಗ್ರಹಣ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಪದ್ಮನಾಭನಗರ ನಿವಾಸದಲ್ಲಿ ವಿಶೇಷ ಪೂಜೆ, ಹವನ ಕಾರ್ಯಕ್ರಮಗಳು ನಡೆಯಲಿವೆ.
ಈ ಕಾರ್ಯಕ್ರಮಗಳಲ್ಲಿ ಸಿಎಂ ಕುಮಾರಸ್ವಾಮಿ, ಎಚ್ ಡಿ ರೇವಣ್ಣ ಸೇರಿದಂತೆ ಇಡೀ ಕುಟುಂಬ ವರ್ಗವೇ ಪಾಲ್ಗೊಳ್ಳಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.