Publish Date: Mon, 25 Mar 2019 (09:41 IST)
Updated Date: Mon, 25 Mar 2019 (09:42 IST)
ಮಂಡ್ಯ: ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಶತಾಯ ಗತಾಯ ಗೆಲ್ಲಿಸಲು ಪಣ ತೊಟ್ಟಿರುವ ಸಿಎಂ ಕುಮಾರಸ್ವಾಮಿ ಇದೀಗ ಎದುರಾಳಿ ಸುಮಲತಾ ಅಂಬರೀಶ್ ಪರವಾಗಿ ನಿಂತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರಕ್ಕೆ ನಿಂತಿರುವ ದರ್ಶನ್ ನಾವು ಜೋಡೆತ್ತುಗಳು ಎಂದು ತಮ್ಮನ್ನು ಹಾಗೂ ರಾಕಿಂಗ್ ಸ್ಟಾರ್ ಯಶ್ ರನ್ನು ಉದ್ದೇಶಿಸಿ ಹೇಳಿದ್ದರು.
ದರ್ಶನ್ ಹೇಳಿಕೆಗೆ ಮಾಧ್ಯಮಗಳೊಂದಿಗೆ ಮಾತನಾಡುವ ಟಾಂಗ್ ಕೊಟ್ಟಿರುವ ಕುಮಾರಸ್ವಾಮಿ ಇವರು ಜೋಡೆತ್ತುಗಳಲ್ಲ, ಕಳ್ಳೆತ್ತುಗಳು ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲ, ಸುಮಲತಾ ಪರ ನಿಂತಿರುವ ದರ್ಶನ್, ಯಶ್ ವಿರುದ್ಧ ಮಂಡ್ಯದಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ತಿರುಗೇಟು ನೀಡುವುದಾಗಿ ಹೇಳಿದ್ದಾರೆ. ಇದಕ್ಕೆ ಸಿದ್ಧತೆಯನ್ನೂ ಮಾಡಿಕೊಂಡಿದ್ದಾರೆ.
ಇನ್ನೊಂದೆಡೆ ಪಕ್ಷೇತರರಾಗಿ ನಿಂತಿರುವ ಸುಮಲತಾಗೆ ಬಿಜೆಪಿ ಬೆಂಬಲ ಘೋಷಿಸಿದೆ. ಈ ನಡುವೆ ಇಂದು ಸುಮಲತಾ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಬೆಂಬಲ ಕೇಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ