Webdunia - Bharat's app for daily news and videos

Install App

ನಾನು ಯಾವುದೇ ಜಾತಿ, ಭಾಗಕ್ಕೆ ಮಾತ್ರ ಮುಖ್ಯಮಂತ್ರಿಯಾಗಿಲ್ಲ: ಸಿಎಂ ಎಚ್ ಡಿಕೆ

Webdunia
ಸೋಮವಾರ, 9 ಜುಲೈ 2018 (11:43 IST)
ಬೆಂಗಳೂರು: ಬಜೆಟ್ ಮೇಲಿನ ಪ್ರಶ್ನೋತ್ತರ ಕಲಾಪ ವಿಧಾನಸಭೆಯಲ್ಲಿ ಆರಂಭಗೊಂಡಿದ್ದು, ಸಿಎಂ ಎಚ್ ಡಿ ಕುಮಾರಸ್ವಾಮಿ ವಿಪಕ್ಷ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಎಂ ಕುಮಾರಸ್ವಾಮಿ ತಮ್ಮ ಮೇಲಿನ ತಾರತಮ್ಯ ಆರೋಪಕ್ಕೆ ತಿರುಗೇಟು ನೀಡಿದ್ದು ನಾನು ಯಾವುದೇ ಜಾತಿ, ಭಾಗಕ್ಕೆ ಮಾತ್ರ ಮುಖ್ಯಮಂತ್ರಿಯಾಗಿಲ್ಲ ಎಂದಿದ್ದಾರೆ. ಸಿಎಂ ಹೀಗೆ ಹೇಳುತ್ತಿದ್ದಂತೇ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

‘ನಾನು ಯಾವುದೋ ಒಂದು ಭಾಗಕ್ಕೆ ಮುಖ್ಯಮಂತ್ರಿಯಾಗಿಲ್ಲ. ಹಾಸನಕ್ಕೆ ರಿಂಗ್ ರೋಡ್ ನಿರ್ಮಿಸಲು 30 ಕೋಟಿ ರೂ. ಕೊಟ್ಟಿದ್ದೇನೆಂದರೆ ಆಕ್ಷೇಪ ವ್ಯಕ್ತಪಡಿಸುತ್ತೀರಿ. ಹಾಸನದಲ್ಲಿ ನಾನಾ ಶಾಸಕ? ಬಿಜೆಪಿಯವರು ಶಾಸಕರು. ನಿಮಗೆ ಬೇಡ್ವಾ? ಬೇಡಾಂದ್ರೆ ಕೊಡಿ, ಅದನ್ನೇ ಉತ್ತರ ಕರ್ನಾಟಕಕ್ಕೆ ಕೊಡ್ತೀನಿ. ಯಾವ ಭಾಗಕ್ಕೆ ಯಾವ ಸರ್ಕಾರದ ಅವಧಿಯಲ್ಲಿ ಎಷ್ಟೆಷ್ಟು ಖರ್ಚು ಮಾಡಲಾಗಿದೆ ಎನ್ನುವುದು ಈ ಸದನದಲ್ಲೇ ಚರ್ಚೆಯಾಗಲಿ’ ಎಂದು ಸಿಎಂ ಕುಮಾರಸ್ವಾಮಿ ಸವಾಲು ಹಾಕಿದರು. ಸಿಎಂ ಸವಾಲಿಗೆ ಪ್ರತಿಪಕ್ಷ ಬಿಜೆಪಿ ಸದಸ್ಯರು 50 ವರ್ಷಗಳ ಸಾಧನೆಗಳು ಚರ್ಚೆಯಾಗಲಿ ಎಂದು ಪ್ರತಿ ಸವಾಲು ಹಾಕಿದರು.

ಇನ್ನು ಸಾಲ ಮನ್ನಾ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಒಂದು ಒಳ್ಳೆ ಮಾತಾಡಿಲ್ಲ ಎಂದು ಬಿಜೆಪಿಗೆ ಸಿಎಂ ಕುಮಾರಸ್ವಾಮಿ ಟಾಂಗ್ ಕೊಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments