Webdunia - Bharat's app for daily news and videos

Install App

ರೆಡ್ಡಿ ವಿರುದ್ಧ ಸಿಎಂ ಮಾಸ್ಟರ್ ಪ್ಲಾನ್: ಮತ್ತೆ ಜೈಲು ಪಾಲಾಗ್ತಾರ ಗಾಲಿ ಜನಾರ್ದನ ರೆಡ್ಡಿ?

Webdunia
ಮಂಗಳವಾರ, 7 ನವೆಂಬರ್ 2017 (09:48 IST)
ಬೆಂಗಳೂರು: ಅಕ್ರಮ ಗಣಿಗಾರಿಕೆಯ ಹಳೆ ಪ್ರಕರಣಗಳಿಗೆ ರಾಜ್ಯ ಸರ್ಕಾರ ಮರುಜೀವ ನೀಡುತ್ತಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಬಳಸಿಕೊಳ್ಳಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ಯ ಎನ್ನುವ ಪ್ರಶ್ನೆ ಮೂಡಿದೆ.

ಸಿಎಂ ಸೂಚನೆಯಂತೆ ಸಂಪುಟ ಉಪ ಸಮಿತಿ ಸಭೆ ನಡೆಸಿದ ಸಚಿವ ಹೆಚ್.ಕೆ.ಪಾಟೀಲ್, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಶೇಷ ಆಸಕ್ತಿ ತೋರಿದ್ದಾರೆ. ಈಗಾಗಲೇ ಗಾಲಿ ಜನಾರ್ದನ ರೆಡ್ಡಿ ಗದಗ ಜಿಲ್ಲೆಯ 7 ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ರೆಡ್ಡಿಯನ್ನ ಮಟ್ಟಹಾಕಲು ಹೆಚ್.ಕೆ.ಪಾಟೀಲ್ ಮುಂದಾಗಿದ್ದಾರೆ. ಸಂಪುಟ ಉಪ-ಸಮಿತಿಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಗೆ ಕಳುಹಿಸಿ ಕೊಡಲಿದ್ದಾರೆ. ಇದನ್ನು ಸಂಪುಟ ಸಭೆಯಲ್ಲಿ ಉಪ ಸಮಿತಿ ಶಿಫಾರಸ್ಸು ಅಂಗೀಕರಿಸುವ ಸಾಧ್ಯತೆಯಿದೆ.

ನಂತರ ಈ ನಿರ್ಣಯವನ್ನು ಗೃಹ ಇಲಾಖೆಗೆ ರವಾನೆ ಮಾಡಲಾಗುತ್ತದೆ. ಇತ್ತೀಚೆಗಷ್ಟೇ ಜನಾರ್ದನ ರೆಡ್ಡಿ ಆಸ್ತಿಯನ್ನು ಜಾರಿ ನಿರ್ದೇಶನಾಲಯ ರಿಲೀಸ್ ಮಾಡಿತ್ತು. ಹೀಗಾಗಿ ರೆಡ್ಡಿ ಮುಂದಿನ ಚುನಾವಣೆಯಲ್ಲಿ ತಮ್ಮ ಆಸ್ತಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಗೃಹ ಇಲಾಖೆಯಿಂದ ಹೊಸ ವಿಶೇಷ ತನಿಖಾ ತಂಡ ರಚಿಸಿ, ರೆಡ್ಡಿ ವಿರುದ್ಧ ಹೊಸ ಎಫ್ಐಆರ್ ದಾಖಲು ಮಾಡಿ, ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಚಿಂತನೆ ನಡೆಸುತ್ತಿದೆ.

ಗುಪ್ತಚರ ಇಲಾಖೆಗೆ ಈಗಾಗಲೇ ಕೆಲ ಸೂಚನೆ ನೀಡಿರುವ ಸಿಎಂ ಸಿದ್ಧರಾಮಯ್ಯ, ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗುವವರೆಗೂ ಅವರ ಚಲನವಲನದ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ರೆಡ್ಡಿ ಹಣವನ್ನಿ ಚುನಾವಣೆಗೆ ಬಳಸಿಕೊಳ್ಳಬಹುದು ಎಂಬುದನ್ನು ಅರಿತಿರುವ ಸಿಎಂ, ಮುಂದಿನ ಚುನಾವಣೆ ಘೋಷಣೆಯಾಗುವುದರೊಳಗೆ ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments