Publish Date: Sun, 28 Aug 2022 (14:09 IST)
Updated Date: Sun, 28 Aug 2022 (14:14 IST)
ಮುರುಘಾ ಶ್ರೀಗಳ ಮೇಲಿನ ಆರೋಪ ವಿಚಾರಕ್ಕೆ ಸಿಎಂ ಬೊಮ್ಮಾಯಿ ಪತ್ರಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫೋಕ್ಸೋ ಕೇಸ್ ದಾಖಲಾಗಿದೆ. ಇನ್ನೊಂದು ಕಡೆ ಕಿಡ್ನಾಪ್ ಕೇಸ್ ಸಹ ದಾಖಲಾಗಿದೆ. ಪೊಲೀಸರು ಎರಡು ಪ್ರಕರಣಗಳನ್ನ ತೆನಿಖೆ ಮಾಡ್ತಿದ್ದಾರೆ ಎಂದು ತಿಳಿಸಿದ್ದಾರೆ. ತನಿಖೆ ದೃಷ್ಟಿಯಿಂದ ಈಗ ಮಾತನಾಡುವುದು ಸೂಕ್ತವಲ್ಲ. ಈ ಸಂದರ್ಭದಲ್ಲಿ ವ್ಯಾಖ್ಯಾನ ಮಾಡೋದು ಸರಿಯಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ ಸತ್ಯ ಹೊರಗಡೆ ಬರಲಿದೆ ಎಂದು ತಿಳಿಸಿದ್ದಾರೆ.