Webdunia - Bharat's app for daily news and videos

Install App

ರೈತರ ಹಿತ ಕಾಪಾಡಿ ಎಂದು ಕೇಂದ್ರ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

Webdunia
ಗುರುವಾರ, 5 ಅಕ್ಟೋಬರ್ 2023 (21:00 IST)
ಇಂದಿನ ಕೇಂದ್ರ ಬರ ಅಧ್ಯಯನ ತಂಡದ ಜತೆಗಿನ ಸಭೆಯಲ್ಲಿ ಸಿಎಂ ಸಲಹೆ ನೀಡಿದ್ದಾರೆ.ರಾಜ್ಯದ ಬರ-ಕೃಷಿ ಪರಿಸ್ಥಿತಿಯ ವಾಸ್ತವಾಂಶವನ್ನ ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಸಿಎಂ ತಿಳಿಸಿದ್ದಾರೆ.ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ.ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ.ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು.ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.
 
ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡಲು ಮನವಿ ಮಾಡಿದ್ದಾರೆ.ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕೆಂದು ಸಿಎಂ ಅಭಿಪ್ರಾಯಪಟ್ಟರು.ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆ ಹಿನ್ನೆಲೆ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ.ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ.ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ವಿವರಿಸಿದ್ರು.ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ.ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದು ಸಿಎಂ ವಿವರಿಸಿದ್ರು.
 
ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ.ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು.ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗ ಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ.ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದ್ರು
 
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ವಿ. ಮಹೇಶ್‌ ,ಕೇಂದ್ರ ತಂಡದ ಮುಖ್ಯಸ್ಥ ಅಜಿತ್‌ ಕುಮಾರ್‌ ಸಾಹು ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments