Webdunia - Bharat's app for daily news and videos

Install App

ಉಪಚುನಾವಣೆ ಗೆಲುವಿನ ಬಲ: ಮುಸ್ಲಿಮರಿಗೆ ಮೀಸಲಾತಿ ಕೊಟ್ಟರೆ ತಪ್ಪೇನು ಎಂದ ಸಿಎಂ ಸಿದ್ದರಾಮಯ್ಯ

Krishnaveni K
ಸೋಮವಾರ, 25 ನವೆಂಬರ್ 2024 (09:52 IST)
ಬೆಂಗಳೂರು: ಉಪಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿರುವ ಸಿಎಂ ಸಿದ್ದರಾಮಯ್ಯ ಈಗ ಮುಸ್ಲಿಮರಿಗೆ ಸಿವಿಲ್ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡುವ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದ್ದಾರೆ.

ಉಪಚುನಾವಣೆ ಹೊಸ್ತಿಲಲ್ಲಿ ಮುಸ್ಲಿಮರಿಗೆ ಸರ್ಕಾರದ ಸಿವಿಲ್ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಯನ್ನು ಸಿಎಂ ಒಪ್ಪಿಕೊಂಡಿದ್ದಾರೆ ಎಂದು ಸುದ್ದಿಬಂದಿತ್ತು. ಇದರ ಬೆನ್ನಲ್ಲೇ ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಮತದಾನದ ಮೇಲೆ ಈ ವಿಚಾರ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಿಎಂ ಆದಿಯಾಗಿ ರಾಜ್ಯ ಸರ್ಕಾರದ ಸಚಿವರೆಲ್ಲರೂ ಸ್ಪಷ್ಟನೆ ನೀಡಿದ್ದರು.

ಆದರೆ ಈಗ ಉಪಚುನಾವಣೆ ಮುಗಿದಿದ್ದು ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ವಿಶೇಷವೆಂದರೆ ಈ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಅಲ್ಪಸಂಖ್ಯಾತರೇ ನಿರ್ಣಾಯಕ ಪಾತ್ರ ವಹಿಸಿದ್ದರು. ಹೀಗಾಗಿ ಈಗ ಮತ್ತೆ ಮುಸ್ಲಿಮ್ ಮೀಸಲಾತಿ ವಿಚಾರ ಮುನ್ನಲೆಗೆ ಬಂದಿದೆ.

ಈ ಬಗ್ಗೆ ಮಾತನಾಡಿರುವ ಸಿಎಂ ಅಂತಹ ಪ್ರಸ್ತಾವನೆಯನ್ನು ತಳ್ಳಿ ಹಾಕಿಲ್ಲ. ಒಂದು ವೇಳೆ ಮುಸ್ಲಿಮರಿಗೆ ಮೀಸಲಾತಿ ಕೊಟ್ಟರೆ ತಪ್ಪೇನು ಎಂದು ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಿದ್ದು ಸರ್ಕಾರ ಈ ಪ್ರಸ್ತಾವನೆಗೆ ಅಂಕಿತ ಹಾಕುವ ಎಲ್ಲಾ ಲಕ್ಷಣಗಳಿವೆ. ಇದಕ್ಕೆ ಬಿಜೆಪಿಯಿಂದ ಯಾವ ರೀತಿ ಪ್ರತಿಕ್ರಿಯೆ ಬರುತ್ತದೆ ನೋಡಬೇಕಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments