Webdunia - Bharat's app for daily news and videos

Install App

ರಾಜ್ಯದಲ್ಲೇ ಸಮಸ್ಯೆ ಬೆಟ್ಟದಷ್ಟಿರುವಾಗ ವಯನಾಡು ಸಂತ್ರಸ್ತರಿಗೆ ಮನೆ ಕಟ್ಟಿಕೊಡಲು ನಿರ್ಧರಿಸಿದ ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 11 ಡಿಸೆಂಬರ್ 2024 (14:30 IST)
ಬೆಂಗಳೂರು: ರಾಜ್ಯದಲ್ಲೇ ಬೇಕಾದಷ್ಟು ಸಮಸ್ಯೆಗಳಿರುವಾಗ ಸಿಎಂ ಸಿದ್ದರಾಮಯ್ಯ ನೆರೆ ರಾಜ್ಯ ಕೇರಳದ ವಯನಾಡಿನ ಗುಡ್ಡ ಕುಸಿತ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲು ಮುಂದಾಗಿರುವುದು ಟೀಕೆಗೆ ಗುರಿಯಾಗಿದೆ.

ಈ ಬಗ್ಗೆ ಟೀಕೆ ಮಾಡಿರುವ ಬಿಜೆಪಿ ಎಂಎಲ್ ಸಿ ಸಿಟಿ ರವಿ, ರಾಜ್ಯದಲ್ಲೇ ಬಾಣಂತಿಯರ ಸಾವು, ರೈತರ ಆತ್ಮಹತ್ಯೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ಇಂತಹ ಸಂದರ್ಭದಲ್ಲಿ ನೆರೆ ರಾಜ್ಯದ ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಿರುವುದು ಮಾನವೀಯತೆಯಿಂದಲ್ಲ. ಗುಲಾಮಗಿರಿಯ ಸಂಕೇತ ಎಂದು ಸಿಟಿ ರವಿ ಹೇಳಿದ್ದಾರೆ.

ಎಲ್ಲರಿಗೂ ಗೊತ್ತಿರುವ ಹಾಗೆ ವಯನಾಡು ಈ ಹಿಂದೆ ರಾಹುಲ್ ಗಾಂಧಿ ಪ್ರತಿನಿಧಿಸಿದ್ದ ಮತ್ತು ಈಗ ಅವರ ಸಹೋದರಿ ಪ್ರಿಯಾಂಕ ವಾದ್ರಾ ಪ್ರತಿನಿಧಿಸುತ್ತಿರುವ ಕ್ಷೇತ್ರ. ರಾಹುಲ್ ಗಾಂಧಿ ಸೂಚನೆ ಮೇರೆಗೇ ಕರ್ನಾಟಕ ಸರ್ಕಾರ ಈ ಹಿಂದೆ ವಯನಾಡು ಸಂತ್ರಸ್ತರಿಗೆ 100 ಮನೆ ಕಟ್ಟಿಕೊಡುವ ನಿರ್ಧಾರ ಮಾಡಿತ್ತು ಎಂಬ ಮಾತುಗಳು ಕೇಳಿಬಂದಿದ್ದವು.

ಇದೀಗ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನೆ ಕಟ್ಟಿಸಿಕೊಡುವುದಾಗಿ ವಾಗ್ದಾನ ನೀಡಿರುವುದು ಟೀಕೆಗೆ ಗುರಿಯಾಗಿದೆ. ಈ ಹಿಂದೆಯೂ ಕರ್ನಾಟಕ ಸರ್ಕಾರ ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆಗಲೂ ರಾಹುಲ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಪರಿಹಾರ ಸೂಚಿಸಿತ್ತು ಎನ್ನಲಾಗಿತ್ತು. ನಮ್ಮ ರಾಜ್ಯದಲ್ಲೇ ಪರಿಹರಿಸಬೇಕಾದ ಸಮಸ್ಯೆಗಳು ಬೇಕಷ್ಟಿರುವಾಗ ನೆರೆ ರಾಜ್ಯದ ಸಮಸ್ಯೆಗಳಿಗೆ ಕರ್ನಾಟಕ ಯಾಕೆ ಆರ್ಥಿಕ ಸಹಾಯಕ್ಕೆ ಮುಂದಾಗಬೇಕು ಎಂಬುದು ಎಲ್ಲರ ಪ್ರಶ್ನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments