Webdunia - Bharat's app for daily news and videos

Install App

ನಾವು ಅಧಿಕಾರಕ್ಕೆ ಬಂದರೆ ಪೆಟ್ರೋಲ್ ದರ ಏರಿಸಲ್ಲ ಎಂದಿದ್ದ ಸಿದ್ದರಾಮಯ್ಯ ಇಂದು ಮಾತು ಮರೆತರು

Krishnaveni K
ಸೋಮವಾರ, 17 ಜೂನ್ 2024 (10:20 IST)
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಾವು ಅಧಿಕಾರಕ್ಕೆ ಬಂದರೆ ಪೆಟ್ರೋಲ್ ದರ ಏರಿಸಲ್ಲ, ಡೀಸೆಲ್ ದರ ಏರಿಸಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಮಾತು ಮರೆತಿದ್ದಾರೆ. ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಚುನಾವಣೆ ಪ್ರಚಾರದ ವೇಳೆ ಗ್ಯಾರಂಟಿ ಯೋಜನೆಗಳ ಘೋಷಣೆಗಳ ಜೊತೆ ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗತ್ಯ ವಸ್ತುಗಳ ದರ ಏರಿಕೆ ಮಾಡಲ್ಲ. ಪೆಟ್ರೋಲ್ ದರ ಏರಿಸಲ್ಲ, ಡೀಸೆಲ್ ದರ ಏರಿಸಲ್ಲ ಎಂದಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ಸರ್ಕಾರ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದೆ.

ಇದೀಗ ಸಿದ್ದರಾಮಯ್ಯ ಚುನಾವಣೆ ಪ್ರಚಾರದ ವೇಳೆ ನಾವು ದರ ಏರಿಕೆ ಮಾಡಲ್ಲ ಎನ್ನುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಸಿದ್ದರಾಮಯ್ಯ ಇಷ್ಟು ಬೇಗ ಮಾತು ಮರೆತರಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಆರಂಭದಲ್ಲಿ ಹಾಕಿದ್ದ ಲೆಕ್ಕಾಚಾರಗಳಿಗಿಂತ ಹೆಚ್ಚು ಗ್ಯಾರಂಟಿ ಯೋಜನೆಗಳಿಗೆ ಹಣ ಬೇಕಾಗಿಬರುತ್ತಿದೆ. ಅಲ್ಲದೆ ಇತ್ತೀಚೆಗೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ. ಇದೆಲ್ಲದರ ನಡುವೆ ಸರ್ಕಾರ ಈಗ ಉಚಿತ ಭಾಗ್ಯಗಗಳನ್ನು ನೀಡಲು ಜನರಿಗೇ ಬರೆ ಹಾಕಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಧರ್ಮಸ್ಥಳದ ಏರೋಸ್ಪೇಸ್ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು: ಕೊಲೆ ಶಂಕೆ, ಸಮಗ್ರ ತನಿಖೆಗೆ ತಾಯಿ ಒತ್ತಾಯ

ಮುಂದಿನ ಸುದ್ದಿ
Show comments