Webdunia - Bharat's app for daily news and videos

Install App

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಹೆಚ್ಚಿಸಿದ್ದು ನಾನು: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 21 ನವೆಂಬರ್ 2024 (16:51 IST)
ನವದೆಹಲಿ:  ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ರಾಜಧಾನಿ  ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ  ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.
 
ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ
 
ರಾಜ್ಯದಲ್ಲಿ  ಪ್ರತಿದಿನ  92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು,  ರಾಜ್ಯ ಸರ್ಕಾರ  ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ  ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು.  ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.
 
 
ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್  ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದರು.
 
ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ಗೋವಿಂದರಾಜು, ಮುಖ್ಯಮಂತ್ರಿಗಳ  ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ, ಮೊದಲಾದವರು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments