Webdunia - Bharat's app for daily news and videos

Install App

ಕಾವೇರಿ ಯೋಜನೆ ಉದ್ಘಾಟನೆಗೆ ಸಹೋದ್ಯೋಗಿಗಳೊಂದಿಗೆ ಬಸ್ ನಲ್ಲಿ ಬಂದ ಸಿಎಂ ಸಿದ್ದರಾಮಯ್ಯ

Krishnaveni K
ಬುಧವಾರ, 16 ಅಕ್ಟೋಬರ್ 2024 (13:56 IST)
ಬೆಂಗಳೂರು: BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ  ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು  ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ  ಬುಧವಾರ ಲೋಕಾರ್ಪಣೆಗೊಳಿಸಿದರು.
 
ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕರಾದ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. 
 
ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.
 
ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.
 
ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ. 
 
ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.
----

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments