Webdunia - Bharat's app for daily news and videos

Install App

ಸಾರ್ವಜನಿಕ ವೇದಿಕೆಯಲ್ಲೇ ಎಎಸ್‌ಪಿಗೆ ಹೊಡೆಯಲು ಮುಂದಾದ ಸಿಎಂ: ಸಿದ್ದರಾಮಯ್ಯ ಕೋಪಕ್ಕೆ ಭಾರೀ ಟೀಕೆ

Sampriya
ಸೋಮವಾರ, 28 ಏಪ್ರಿಲ್ 2025 (18:11 IST)
Photo Credit X
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ವೇದಿಕೆ ಮೇಲೆ ಪೊಲೀಸ್ ಅಧಿಕಾರಿಯೊಬ್ಬರಿಗೆ ಕೈ ಎತ್ತಿ ಹೊಡೆಯಲು ಮುಂದಾದ ಘಟನೆ ಇಂದು ನಡೆದಿದೆ. ಸಮವಸ್ತ್ರದಲ್ಲಿದ್ದ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಕೈ ಎತ್ತಿದ್ದಾರೆ. ಸದ್ಯ ಸಿಎಂ ಕೋಪಿಸಿಕೊಂಡು ಕೈ ಎತ್ತಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಸಿಎಂ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ನಿರಂತರ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕೂಡ ಬಂದಿದ್ದರು. ಕಾಂಗ್ರೆಸ್ ಪ್ರತಿಭಟನೆಯನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕೂಡ ಪ್ರತಿಭಟನೆ ಮಾಡುತ್ತಿದ್ದರು.

ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಮಾಡುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಎಂಟ್ರಿ ನೀಡಿತ್ತು. ಈ ವಿಷಯವನ್ನು ಸಿಎಂ ಸಿದ್ದರಾಮಯ್ಯಗೆ ತಿಳಿಸಲು ಬಂದ ಎಎಸ್‌ಪಿಗೆ ಸಿದ್ದರಾಮಯ್ಯ ಹೊಡೆಯಲು ಕೈ ಎತ್ತುತ್ತಾರೆ.

ಬಿಜೆಪಿ ಕಾರ್ಯಕರ್ತರು ವೇದಿಕೆಗೆ ನುಗ್ಗುತ್ತಿದ್ದಾರೆ ಎಂದು ಸಿಎಂಗೆ ಮಾಹಿತಿ ನೀಡುತ್ತಾರೆ. ಅದಕ್ಕೆ ಕೋಪಿಸಿಕೊಂಡ ಸಿದ್ದರಾಮಯ್ಯ, ವೇದಿಕೆಗೆ ಬರುವ ತನಕ ನೀವು ಏನು ಮಾಡುತ್ತಿದ್ದೀರಿ? ಅಂತಾ ಅಧಿಕಾರಿ ಮೇಲೆ ಕೈಎತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments