ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಮನವಿ

Webdunia
ಗುರುವಾರ, 16 ನವೆಂಬರ್ 2017 (10:05 IST)
ಬೆಂಗಳೂರು: ಖಾಸಗಿ ವೈದ್ಯರಿಗೆ ಕಡಿವಾಣ ಹಾಕುವಂತಹ ವಿಧೇಯಕ ಮಂಡಿಸಲು ಹೊರಟಿರುವ ಸರ್ಕಾರದ ವಿರುದ್ಧ ಮುಷ್ಕರ ನಿರತರಾಗಿರುವ ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ಮುಷ್ಕರ ಕೈ ಬಿಡುವಂತೆ ಮನವಿ ಮಾಡಿದ್ದಾರೆ.

 
ಖಾಸಗಿ ವೈದ್ಯರ ಮುಷ್ಕರದಿಂದಾಗಿ  ರೋಗಿಗಳು ಪರದಾಡುವಂತಾಗಿದೆ. ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪಿರುವವರ ಸಂಖ್ಯೆ 25 ಕ್ಕೇರಿದೆ. ಈ ಹಿನ್ನಲೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕರ್ತವ್ಯಕ್ಕೆ ಹಾಜರಾಗಿ ಎಂದು ಸಿಎಂ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.

ಅತ್ತ ವೈದ್ಯರ ಮುಷ್ಕರದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯಾದ್ಯಂತ ರಾಜ್ಯದ, ಹೊರ ರಾಜ್ಯದ ರೋಗಿಗಳು ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ. ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ವೈದ್ಯರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments