ತೈವಾನ್ ಮೂಲದ ನಿಯೋಗ ಸಿಎಂ ಭೇಟಿ ಮಾಡಿದ್ಯಾಕೆ?

Webdunia
ಗುರುವಾರ, 20 ಜೂನ್ 2019 (14:29 IST)
ತೈವಾನ್ ಮೂಲದ ವಿಸ್ಟ್ರಾನ್ ಕಾರ್ಪೊರೇಷನ್ ಕಂಪನಿಯ  ನಿರ್ದೇಶಕ ವಿ.ಲೀ ಅವರ ನೇತೃತ್ವದ ನಿಯೋಗವು ಮುಖ್ಯ ಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದೆ.  

ಕೋಲಾರದ ನರಸಾಪುರದಲ್ಲಿ ಆರಂಭಿಸಲು ಉದ್ದೇಶಿಸಿರುವ 650 ಕೋಟಿ ರೂ.ಬಂಡವಾಳದ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಉತ್ಪನ್ನಗಳ ಕಂಪನಿಗೆ ಈಗಾಗಲೇ 40 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿದ್ದು, ಬಾಕಿ 3 ಎಕರೆ ಜಮೀನು ಮಂಜೂರು ಮಾಡುವಂತೆ  ಲೀ ಅವರು ಮನವಿ ಮಾಡಿದರು. 

ಈಗಾಗಲೇ ವಿಸ್ಟ್ರಾನ್  ಕಂಪನಿಯ ಒಂದು ಘಟಕ  ಪೀಣ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 1500 ಜನರಿಗೆ ಉದ್ಯೋಗ ನೀಡಿದೆ ಎಂದು ಲೀ ತಿಳಿಸಿದರು. ರಾಜ್ಯ ದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಜನೆ ದೃಷ್ಟಿಯಿಂದ ಸರ್ಕಾರದ ವತಿಯಿಂದ ಕಂಪನಿಗೆ ಎಲ್ಲ ಸಹಕಾರ ನೀಡುವ ಭರವಸೆಯನ್ನು  ಮುಖ್ಯಮಂತ್ರಿ ಈ ಸಂದರ್ಭದಲ್ಲಿ ನೀಡಿದರು. 

ಕಂಪನಿಯ ಸ್ಥಳೀಯ ನಿರ್ದೇಶಕ ಸೆಂಥಿಲ್ ಕುಮಾರ್  ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ. ವಿ.ರಮಣರೆಡ್ಡಿ, ವಿಸ್ಟ್ರಾನ್  ಸಂಸ್ಥೆಯ ಹಿರಿಯ  ವ್ಯವಸ್ಥಾಪಕ ಮಂಜುನಾಥ್.ಬಿ. ಉಪಸ್ಥಿತರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌ನ ಸುಪ್ರೀಂ ನಾಯಕ ಅಲ್ ಖಮೇನಿ ಸಾವು, ಅನೇಕ ದೇಶದ ಜನರಿಗೆ ನ್ಯಾಯ ಎಂದ ಟ್ರಂಪ್‌

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ಮುಂದಿನ ಸುದ್ದಿ
Show comments