ನಾಳೆ ಚಾಮರಾಜನಗರಕ್ಕೆ ಸಿಎಂ ಭೇಟಿ

Webdunia
ಬುಧವಾರ, 6 ಅಕ್ಟೋಬರ್ 2021 (13:47 IST)
ಬೆಂಗಳೂರು,ಅ.6 :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌಢ್ಯಕ್ಕೆ ತಿಲಾಂಜಲಿ ಹಾಡಿ ಗಡಿಜಿಲ್ಲೆ ಚಾಮರಾಜನಗರಕ್ಕೆ ನಾಳೆ ಭೇಟಿ ನೀಡುತ್ತಿದ್ದಾರೆ.

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗಲಿದೆ ಎಂಬ ಮೂಢನಂಬಿಕೆಯನ್ನು ಬದಿಗೊತ್ತಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಿಎಂ ಆಗಮಿಸುತ್ತಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಯಲ್ಲಿ ಚಾಮರಾಜನಗರಕ್ಕೆ ಒಂದೇ ಬಾರಿಯೂ ಭೇಟಿ ನೀಡಿರಲಿಲ್ಲ. ಇಲ್ಲಿಗೆ ಭೇಟಿ ನೀಡಿದವರು ಅಕಾರ ಕಳೆದುಕೊಳ್ಳುತ್ತಾರೆ ಎಂಬ ಭೀತಿಯಲ್ಲಿ ಅವರು ಕೂಡ ಮೌಢ್ಯಕ್ಕೆ ಶರಣಾಗಿದ್ದರು.
ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಬಸವರಾಜ ಬೊಮ್ಮಾಯಿ ಅವರು, ಮೂಢನಂಬಿಕೆ ಹಾಗೂ ಮೌಢ್ಯವನ್ನು ನಂಬುವುದಿಲ್ಲ. ಎಲ್ಲ ಅಡೆತಡೆಗಳನ್ನು ಮೆಟ್ಟಿ ಅವರು ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನಾಳೆ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆ ಉದ್ಘಾಟನೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments