Webdunia - Bharat's app for daily news and videos

Install App

ಕರ್ನಾಟಕ ಬಂದ್ ಅಂತ ಸಾರ್ವಜನಿಕರ ಆಸ್ತಿಗೆ ಡ್ಯಾಮೇಜ್ ಮಾಡಿದ್ರೋ ಕಾದಿದೆ ಶಿಕ್ಷೆ

Krishnaveni K
ಶುಕ್ರವಾರ, 21 ಮಾರ್ಚ್ 2025 (16:40 IST)
ಬೆಂಗಳೂರು: ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಇದನ್ನೇ ಬಂಡವಾಳವಾಗಿಟ್ಟುಕೊಂಡು ಸಾರ್ವಜನಿಕರ ಆಸ್ತಿ ಪಾಸ್ತಿಗೆ ಹಾನಿ ಮಾಡುವ ಕಿಡಿಗೇಡಿಗಳಿಗೆ ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ವಿರೋಧಿಸಿ ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆನೀಡಿವೆ. ಆದರೆ ಬಂದ್ ನೆಪದಲ್ಲಿ ಕೆಲವರು ಕಲ್ಲು ತೂರಾಟ ನಡೆಸಿ ಸಾರ್ವಜನಿಕರ ಆಸ್ತಿ ಪಾಸ್ತಿಗೆ ಹಾನಿ ಮಾಡುತ್ತಾರೆ. ಒಂದು ವೇಳೆ ಈ ರೀತಿ ಏನಾದರೂ ಮಾಡಿದಲ್ಲಿ ಅವರೇ ನಷ್ಟ ಭರಿಸಿಕೊಡಬೇಕಾಗುತ್ತದೆ ಎಂದು ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

ಇನ್ನು, ಬಂದ್ ಗೆ ಬೆಂಬಲ ಸೂಚಿಸಿದ್ದ ಖಾಸಗಿ ಬಸ್ ಗಳ ಒಕ್ಕೂಟ ಬಸ್ ಸಂಚಾರವಿರಲ್ಲ ಎಂದಿತ್ತು. ಆದರೆ ಈಗ ಕಮಿಷನರ್ ಎಚ್ಚರಿಕೆ ನೀಡಿದ್ದು ಸಾರಿಗೆ ಸಂಘಟನೆಗಳಿಗೆ ಪತ್ರ ಬರೆದು ಬಸ್ ಸಂಚಾರ ಸ್ಥಗಿತಗೊಳಿಸದೇ ಇರಲು ಸೂಚಿಸಿದ್ದಾರೆ.

ಹೀಗಾಗಿ ನಾಳೆ ಖಾಸಗಿ ಬಸ್ ಸಂಚರಿಸಲಿದೆ. ನಾವು ನೈತಿಕ ಬೆಂಬಲ ನೀಡಲಿದ್ದೇವೆ. ಆದರೆ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಬಸ್ ಓಡಾಟವಿರಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments