Publish Date: Thu, 20 Apr 2023 (15:25 IST)
Updated Date: Thu, 20 Apr 2023 (15:40 IST)
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಕೊಲೆ ಆರೋಪಿ, ಆತನ ಜೊತೆ ಇದ್ದವರನ್ನು ಕೂಡ ಬಂಧನ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯಸಿಂಗ್, ಯೋಗಿ ಆದಿತ್ಯನಾಥ್ಗೆ ಮನವಿ ಮಾಡಿದ್ದಾರೆ.. ಆದರೆ ಈಗ ಇಮ್ರಾನ್ ಪ್ರತಾಪ್ ಗಡಿಯಾಯನನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕನನ್ನಾಗಿ ಮಾಡಿದ್ದೀರಿ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಕಿಡಿಕಾರಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಮ್ರಾನ್ನನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಿದ್ದೀರಿ... ಹಾಗಾದರೆ ಇಮ್ರಾನ್ ಗಡಿಯಾಗೂ, ಕಾಂಗ್ರೆಸ್ಗೂ ಏನು ಸಂಬಂಧ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.. ಕಾಂಗ್ರೆಸ್ ಕೈ ಅಪರಾಧಿಗಳ ಜೊತೆ ಇದೆ.. ಕಾಂಗ್ರೆಸ್ ಕೈ ಅಪರಾಧ ಕೃತ್ಯಗಳಿಗೆ ಕೈ ಜೋಡಿಸಿದೆ.. ಹಿಂದೂ- ಮುಸ್ಲಿಂ ಒಡೆಯಲು ಇಮ್ರಾನ್ನ ಬಳಸಿಕೊಳ್ಳುತ್ತಿದ್ದೀರಿ ಎಂದು ಆಕ್ರೋಶ ಹೊರ ಹಾಕಿದ್ರು