Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದಾವಣಗೆರೆ : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಕಾರಣರಾದವರನ್ನು ಕಾಂಗ್ರೆಸ್ ನಾಯಕರು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ವೇಳೆ ಕಲ್ಲು ತೂರಾಟ ನಡೆದಿದೆ. ಇದರಲ್ಲಿ ಮುಸ್ಲಿಂ ನಾಯಕ ಅಲ್ತಾಫ್ ಹಳ್ಳೂರು ಭಾಗಿ ಆಗಿರುವುದು ಜಗಜ್ಜಾಹೀರವಾಗಿದೆ.
ಆದರೆ ಕಾಂಗ್ರೆಸ್ ನಾಯಕರು ಅಮಾಯಕರನ್ನು ಬಂಧಿಸಬೇಡಿ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗಲಭೆ ಮಾಡಿದವರನ್ನು ಕಾಂಗ್ರೆಸ್ ನಾಯಕರು
ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಯಾರೋ ಒಬ್ಬರು ಹೇಳಿಕೆ ನೀಡುತ್ತಾರೆ ಅಂದರೆ ಅದನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಟಾಂಗ್ ಕೊಟ್ಟರು. ಒಳ್ಳೆಯ ಗೃಹ ಸಚಿವರು ಬೇಕು ಎಂದು ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದನ್ನು ಪರಿಗಣಿಸಲಾಗುತ್ತದೆ ಎಂದರು.