Webdunia - Bharat's app for daily news and videos

Install App

Waqf Bill: ತಿರುಪತಿಯಲ್ಲೂ ಬೇರೆ ಧರ್ಮದವರನ್ನು ನೇಮಿಸ್ತಾರಾ, ವಕ್ಫ್ ಮಂಡಳಿಯಲ್ಲಿ ಯಾಕೆ: ಬಿಕೆ ಹರಿಪ್ರಸಾದ್

Krishnaveni K
ಬುಧವಾರ, 2 ಏಪ್ರಿಲ್ 2025 (12:37 IST)
ಬೆಂಗಳೂರು: ಕೇಂದ್ರ ಸರ್ಕಾರ ಇಂದು ಮಂಡಿಸಲಿರುವ ವಕ್ಫ್ ತಿದ್ದುಪಡಿ ಬಿಲ್ ಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ತಿರುಪತಿಯಲ್ಲೂ ಅನ್ಯಧರ್ಮದವರನ್ನು ನೇಮಿಸ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.
 

ಕೇಂದ್ರ ಸರ್ಕಾರ ಈಗ ಮಂಡಿಸುತ್ತಿರುವ ವಕ್ಫ್ ತಿದ್ದುಪಡಿ ಬಿಲ್ ನಲ್ಲಿ ವಕ್ಫ್ ಮಂಡಳಿಯಲ್ಲಿ ಇಬ್ಬರು ಅನ್ಯಧರ್ಮೀಯರೂ ಇರಲಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್ ಈ ಮೊದಲಿನಿಂದಲೂ ಆಕ್ಷೇಪವೆತ್ತುತ್ತಲೇ ಇದೆ. ಮುಸ್ಲಿಮರೂ ಈ ಅಂಶದ ಬಗ್ಗೆ ತಗಾದೆ ತೆಗೆದಿದ್ದಾರೆ.

ಇದೀಗ ಇಂದು ಮಾಧ್ಯಮಗಳ ಮುಂದೆ ಮಾತನಾಡಿರುವ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ‘ಹಾಗಿದ್ದರೆ ಕೇಂದ್ರ ಸರ್ಕಾರ ತಿರುಪತಿಯಲ್ಲೂ ಅನ್ಯಧರ್ಮೀಯದ ಅಧಿಕಾರಿಗಳನ್ನು ನೇಮಕ ಮಾಡ್ತಾರಾ? ವಕ್ಫ್ ಮಂಡಳಿ ಎನ್ನುವುದು ಮುಸ್ಲಿಮರ ವೈಯಕ್ತಿಕ ಮಂಡಳಿ. ಅಲ್ಲಿ ಅವರ ಧರ್ಮದ ಆಚರಣೆಗೆ ಅವಕಾಶ ಕೊಡಬೇಕು. ಅಲ್ಲಿ ಅನ್ಯ ಧರ್ಮೀಯರಿಗೆ ಅವಕಾಶ ನೀಡಬಾರದು. ಇದು ಅವರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿ ಮಾಡಿದಂತೆ’ ಎಂದಿದ್ದಾರೆ.

‘ದೇಶದಲ್ಲಿ ಅನೇಕ ಗಂಭೀರ ಸಮಸ್ಯೆಗಳಿವೆ. ಅದನ್ನು ಪರಿಹರಿಸುವ ಬದಲು ಜನರ ಗಮನ ಬೇರೆ ಕಡೆ ಸೆಳೆಯಲು ವಕ್ಫ್ ತಿದ್ದುಪಡಿಗೆ ಕೇಂದ್ರ ಕೈ ಹಾಕಿದೆ. ಈಗಾಗಲೇ ಮನಮೋಹನ್ ಸಿಂಗ್ ಸರ್ಕಾರವಿದ್ದಾಗಲೇ ವಕ್ಫ್ ಬಿಲ್ ಗೆ ತಿದ್ದುಪಡಿ ತಂದು ಸಾಕಷ್ಟು ಸರಳೀಕರಣಗೊಳಿಸಿದ್ದಾರೆ. ಈಗ ಮೋದಿ ಸರ್ಕಾರ ಇಂತಹದ್ದೊಂದು ಬಿಲ್ ತರುವ ಅಗತ್ಯವೇ ಇರಲಿಲ್ಲ’ ಎಂದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments