Webdunia - Bharat's app for daily news and videos

Install App

ಸಿಎಂ ವಿರುದ್ಧ ಕೈ ನಾಯಕರು ಗರಂ!

Webdunia
ಬುಧವಾರ, 3 ಏಪ್ರಿಲ್ 2019 (14:49 IST)
ಮಾಜಿ ಸಿಎಂ ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಸಿಎಂ ವಿರುದ್ಧ ಗರಂ ಆಗಿರುವ ಘಟನೆ ನಡೆದಿದೆ.
ಮಂಡ್ಯ ಕಾಂಗ್ರೆಸ್ ಮುಖಂಡರ ಜೊತೆ  ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಭೆ ನಡೆಯಿತು. ಮಂಡ್ಯಜಿಲ್ಲೆಯ  ಎಂಟು ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಮೈತ್ರಿ ಅಭ್ಯರ್ಥಿಯನ್ನ ಬೆಂಬಲಿಸುವ ವಿಚಾರವಾಗಿ ಸಭೆ ಆಯೋಜಿಸಲಾಗಿತ್ತು. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸ್ಪರ್ಧೆ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರು  ಸುಮಲತಾ ಪರ ಇದ್ದಾರೆ ಎಂಬ ಊಹಪೋಹ ಕೇಳಿ ಬರುತ್ತಿವೆ. ಈ ಹಿನ್ನೆಲೆ ಮಂಡ್ಯ ಕಾಂಗ್ರೆಸ್ ಮುಖಂಡರಲ್ಲಿ ಇರುವ ಬಂಡಾಯ ಶಮನ ಗೊಳಿಸುವಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾಜಿ ಶಾಸಕ ಚೆಲುವರಾಯ ಸ್ವಾಮಿ ಮತ್ತು ಬಂಡಿ ಸಿದ್ದೇಗೌಡ ಸೇರಿದಂತೆ ಪ್ರಮುಖ ಮುಖಂಡರು‌ ಉಪಸ್ಥಿತಿ ಇದ್ದರು.  

ಸಿಎಂ ಅದೇನೇ ಹೇಳಲಿ, ದೇವೇಗೌಡರು ನಮ್ಮ ಜೊತೆಗಿದ್ದಾರೆ ಎಲ್ಲವನ್ನೂ ಸರಿ ಮಾಡೋಣ. ಹಾಸನ, ಮೈಸೂರು, ಮಂಡ್ಯ ,ತುಮಕೂರಲ್ಲಿ ನಾವು ಗೆಲ್ಲಬೇಕಿದೆ. ಚುನಾವಣೆವರೆಗೂ ಎಲ್ಲವನ್ನೂ ಸಹಿಸಿಕೊಂಡಿರಿ, ತಾಳ್ಮೆಯಿಂದಿರಿ.
ಮುಂದೆ ಏನಾಗುತ್ತೋ ಕಾದು ನೋಡೋಣ ಅಂತ ಸಿದ್ದರಾಮಯ್ಯ ಹೇಳಿದ್ರು.

ಮೇಲ್ನೋಟಕ್ಕೆ ಸಿದ್ದು ಮಾತಿಗೆ ಆಯ್ತು ಅನ್ನೋ ರೀತಿಯಲ್ಲಿ ಒಪ್ಪಿಗೆ ನೀಡಿದರು ಕೈಮುಖಂಡ್ರು.  ಸಭೆಯಲ್ಲಿ ‌ ಅಸಮಾಧಾನಗೊಂಡ ಚೆಲುವರಾಯಸ್ವಾಮಿ ಮತ್ತು ತಂಡ, ಒಂದು ಬಾರಿಯಾದ್ರೂ ನಮ್ಮನ್ನ ಕರೆದು ಮಾತಾಡಿದ್ದಾರಾ ಸಿಎಂ? ನಮಗೆ ಮಾನ, ಮರ್ಯಾದೆ, ಗೌರವ ಇಲ್ವಾ? ಏನಾಗುತ್ತೋ ಆಗಲಿ ಬಿಡಿ ಸರ್ ನೋಡೇ ಬಿಡೋಣ ಎಂದು ಗರಂ ಆದರು.
ಆಗ ಸಿದ್ದರಾಮಯ್ಯ ಮಾತನಾಡಿ, ನೀವು ನಿಖಿಲ್ ಗೆ ಗೆಲ್ಲಿಸದಿದ್ದರೆ ಕ್ಷೇತ್ರ ಕಾಂಗ್ರೆಸ್ ಕೈ ಬಿಟ್ಟು ಹೋಗುತ್ತೆ.

ಗೆದ್ದರೆ ಸುಮಲತಾರೇನೂ ಕಾಂಗ್ರೆಸ್ ಗೆ ಬರ್ತಾರೆ ಅನ್ಕೊಂಡಿದ್ದೀರಾ? ಅವರು ಬಿಜೆಪಿಗೆ ಹೋಗೋದು ಗ್ಯಾರಂಟಿ. ಜೆಡಿಎಸ್ ಗೆದ್ದರೆ ಮುಂದೆ ಮತ್ತೇ ಕ್ಷೇತ್ರವನ್ನ ಕೈ ವಶ ಮಾಡಿಕೊಳ್ಳಬಹುದು ಎಂಬ ಲೆಕ್ಕಾಚಾರವನ್ನು ಬಿಡಿಸಿಟ್ಟರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಪುರದಲ್ಲಿ ನಿಯಂತ್ರಣ ತಪ್ಪಿದ ಕಾರು; ಜನರಲ್ಲಿ ಆತಂಕ, Video

ನೇಪಾಳ ಹಠಾತ್ ಪ್ರವಾಹದಲ್ಲಿ 10 ದಿನಗಳ ಬಳಿಕ ಪವಾಡದಂತೆ ಸುರಂಗದಲ್ಲಿ ಬದುಕುಳಿದ ಇಬ್ಬರು, Video

ಅವಧಿ ಮೀರಿದ ಆಹಾರ, ನೈರ್ಮಲ್ಯವಿಲ್ಲದ ಮಾಂಸ: ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗೆ ಬೀಗ

ಮನುಷ್ಯ ನಾಯಿಗಿಂತ ಕಡೆಯಾಗಿಬಿಟ್ಟನೇ… ಕಾಮುಕನಿಂದ ಮಹಿಳೆಯನ್ನು ರಕ್ಷಿಸಿದ ಬೀದಿ ನಾಯಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments