ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ - ಡಿ. ಕೆ. ಶಿವಕುಮಾರ್

Webdunia
ಭಾನುವಾರ, 3 ಜುಲೈ 2022 (18:31 IST)
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಎಲ್ಲರೂ ಮಾತನಾಡುತ್ತಿದ್ದು, ಉತ್ತಮ ಆಡಳಿತಕ್ಕೆ ಕಾಂಗ್ರೆಸ್ ಬರಬೇಕೆಂದು ಬಯಸುತ್ತಿದ್ದಾರೆ. ಇಂತಹ ಅವಕಾಶವನ್ನು ನಾವು ಬಳಸಿಕೊಳ್ಳಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ರವಿವಾರ ಇಲ್ಲಿನ ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಪಕ್ಷದ ವತಿಯಿಂದ ನಾವು ಚುನಾವಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಮೀಕ್ಷೆ ನಡೆಸಿದ್ದು, ವರದಿ ಪಕ್ಷದ ಪರವಾಗಿದೆ. ಸಮೀಕ್ಷೆ ಪಕ್ಕಕ್ಕಿಟ್ಟರೂ ಇತ್ತೀಚೆಗೆ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿಯವರು ಎಷ್ಟು ಗೆದ್ದಿದ್ದಾರೋ ನಾವು ಅಷ್ಟೇ ಗೆದ್ದಿದ್ದೇವೆ. ಪರಿಷತ್ ಚುನಾವಣೆಯಲ್ಲೂ ಪಕ್ಷ ಸಾಧನೆ ಮಾಡಿದೆ. ನಮ್ಮ ಸರಕಾರ ಇದ್ದಾಗ ಮಂಡ್ಯ, ತುಮಕೂರಿನಲ್ಲಿ ಪಕ್ಷ ಸೋತಿತ್ತು. ಈ ಬಾರಿ ಗೆದ್ದಿದ್ದೇವೆ. ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ನಾವು ಗೆದ್ದಿರಲಿಲ್ಲ. ಈಗ ಗೆದ್ದಿದ್ದೇವೆ. ಚುನಾಯಿತ ಪ್ರತಿನಿಧಿಗಳು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದರು. ಇದೀಗ ವಿದ್ಯಾವಂತರು, ಶಿಕ್ಷಕರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಇದು ಜನರ ಅಭಿಪ್ರಾಯ ಏನು ಎಂಬುದನ್ನು ತಿಳಿಸುತ್ತಿದೆ' ಎಂದು ವಿವರಣೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments